ಮಧ್ಯಪ್ರದೇಶ ಸರಕಾರದ ಕ್ರಮ ಖಂಡನೀಯ: ಸಿದ್ದರಾಮಯ್ಯ

Source: Vb | By I.G. Bhatkali | Published on 13th February 2024, 7:34 AM | State News | National News | Don't Miss |

ಬೆಂಗಳೂರು: 'ಹೊಸದಿಲ್ಲಿಯಲ್ಲಿ ಮಂಗಳವಾರ ನಡೆಯಲಿರುವ ಪ್ರತಿಭಟನೆ ಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರಕಾರದ ಕ್ರಮ ಅತ್ಯಂತ ಖಂಡನೀಯ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಈ ಸಂಬಂಧ ಪ್ರಕಟನೆ ನೀಡಿರುವ ಅವರು, 'ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ಹೊಸದಿಲ್ಲಿ ಜಂತರ್‌-ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಕಳಿಸಿಕೊಡಬೇಕು ಎಂದು ಮಧ್ಯಪ್ರದೇಶ ಸರಕಾರವನ್ನು ಒತ್ತಾಯಿಸುತ್ತಿದ್ದೇನೆ' ಎಂದು ತಿಳಿಸಿದ್ದಾರೆ.

'ಬಂಧಿಸಿರುವುದು ಮಧ್ಯಪ್ರದೇಶದ ಸರಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಎನ್ನುವುದು ಸ್ಪಷ್ಟ ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂಥ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ ಕಾಳಜಿಯನ್ನು ಕೇಂದ್ರ ಸರಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ' ಎಂದು ಸಲಹೆ ನೀಡಿದ್ದಾರೆ.

ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ, ಗೊಬ್ಬರ ಕೇಳಿದ್ದ ರೈತರನ್ನು ಯಡಿಯೂರಪ್ಪ ನೇತೃತ್ವದ ಸರಕಾರ ನಿರ್ದಯವಾಗಿ ಗುಂಡಿಕ್ಕಿ ಕೊಂದಿತ್ತು' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...