ಜಾಮೀನು ನೀಡುವಾಗ ಆರೋಪಿಯ ಇತಿಹಾಸ ತಿಳಿದುಕೊಳ್ಳಿ: ಸುಪ್ರೀಂ

Source: PTI | By MV Bhatkal | Published on 12th September 2021, 7:20 PM | National News | Don't Miss |

ನವದೆಹಲಿ: ಜಾಮೀನಿನ ಮೇಲೆ ಆರೋಪಿಯೊಬ್ಬ ಬಿಡುಗಡೆಯಾದರೆ ಆತ ಆ ಅವಧಿಯಲ್ಲಿ ಗಂಭೀರ ಅಪರಾಧಗಳನ್ನು ನಡೆಸಬಹುದೇ ಎಂಬುದನ್ನು ಅಂದಾಜಿಸಲಿಕ್ಕಾಗಿ ಅಂತಹ ವ್ಯಕ್ತಿಯ ಇತಿಹಾಸ ತಿಳಿಯುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್ ಕೊಲೆ ಆರೋಪಿಯೊಬ್ಬನಿಗೆ ಜಾಮೀನು ನೀಡಿದ್ದ ಆದೇಶವೊಂದನ್ನು ರದ್ದುಪಡಿಸಿದ ವೇಳೆ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಮತ್ತು ಎಂ.ಆರ್.ಷಾ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

‘ಜಾಮೀನು ಅರ್ಜಿಗಳನ್ನು ನಿರ್ಧರಿಸುವಾಗ ಆರೋಪದ ಗಹನತೆ ಮತ್ತು ಸಾಕ್ಷ್ಯಗಳೂ ಪ್ರಮುಖವಾಗುತ್ತವೆ. ಆರೋಪ ಸಾಬೀತಾದ ಸಂದರ್ಭದಲ್ಲಿ ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸುವಲ್ಲಿಯೂ ಇದು ಮುಖ್ಯವಾಗುತ್ತದೆ’ ಎಂದು ಪೀಠ ಹೇಳಿತು.

ಈ ಹಿಂದಿನ ನಿರ್ಧಾರಗಳನ್ನು ಉಲ್ಲೇಖಿಸಿದ ಪೀಠ, ಜಾಮೀನು ನಿರಾಕರಿಸುವ ಮೂಲಕ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವುದು ಶಿಕ್ಷೆಯ ಉದ್ದೇಶಕ್ಕಾಗಿ ಅಲ್ಲ, ಬದಲಿಗೆ ನ್ಯಾಯದಾನದಲ್ಲಿನ ಹಲವು ಹಿತಾಸಕ್ತಿಗಳನ್ನು ಈಡೇರಿಸುವುದಕ್ಕಾಗಿರುತ್ತದೆ ಎಂದು ತಿಳಿಸಿತು.

ಯಾವುದೇ ಆರೋಪಿಗೆ ಜಾಮೀನು ನೀಡುವುದಕ್ಕೆ ಮೊದಲು ಆತ ಎಂತಹ ಅಪರಾಧ ಎಸಗಿದ್ದಾನೆ, ಒಂದು ವೇಳೆ ಆರೋಪ ಸಾಬೀತಾದರೆ ಎಂತಹ ಶಿಕ್ಷೆ ಅನುಭವಿಸಬಹುದು, ಪೂರಕ ಸಾಕ್ಷ್ಯಗಳ ಲಕ್ಷಣಳೇನು, ಸಾಕ್ಷ್ಯಗಳನ್ನು ನಾಶಪಡಿಸುವ ಅಥವಾ ತಿರುಚುವ ಸಾಧ್ಯತೆಗಳಿವೆಯೇ, ಕಕ್ಷಿದಾರನಿಗೆ ಬೆದರಿಕೆ ಒಡ್ಡಬಹುದಾದ ಸಾಧ್ಯತೆಗಳಿವಯೇ ಮೊದಲಾದ ವಿಚಾರಗಳನ್ನು ಗಮನಕ್ಕೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ಪೀಠ ಹೇಳಿತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...