ತಾಲ್ಲೂಕು ಪಂಚಾಯಿತ ಪ್ರಥಮ ದರ್ಜೆ ಸಹಾಯಕನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌

Source: sonews | By Staff Correspondent | Published on 26th October 2020, 9:12 PM | State News | Don't Miss |

ಶ್ರೀನಿವಾಸಪುರ: ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಲಾಗಿದ್ದ ಮಾಹಿತಿ ನೀಡಲು ವಿಫಲವಾದ ಹಿನ್ನೆಲೆಯಲ್ಲಿ, ತಾಲ್ಲೂಕು ಪಂಚಾಯಿತಿ ಪ್ರಥಮ ದರ್ಜೆ ಸಹಾಯಕ ಎಸ್‌. ಮಂಜುನಾಥ ಅವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ತಾಲ್ಲೂಕು ಪಂಚಾಯಿತಿ ಕಾರ್ಯಾಲಯಕ್ಕೆ ಸಂಬಂಧಿಸಿದಂತೆ ಸ್ಟಾಂಪ್‌ ಡ್ಯೂಟಿ ಅಡಿಯಲ್ಲಿ ಬಿಡುಗಡೆಯಾಗಿರುವ ಹಣ ಹಾಗೂ ವೆಚ್ಚಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳು

ಅಗತ್ಯ ಮಾಹಿತಿ ನೀಡುವಂತೆ ಕೋರಿ ಪಟ್ಟಣದ ಜಾಕೀರ್‌ ಹುಸೇನ್‌ ಮೊಹಲ್ಲಾದ ಶಬ್ಬೀರ್ ಅಹಮ್ಮದ್ ಅವರು 2016ರಲ್ಲಿ ಮಾಹಿತಿ ಹಕ್ಕು ಅರ್ಜಿ ಸಲ್ಲಿಸಿದ್ದರು.

ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಲೆಕ್ಕ ಶಾಖಾ ವಿಭಾಗದಲ್ಲಿ ಕರ್ತವ್ಯ ನಿವರ್ತಹಿಸುತ್ತಿರುವ ಶ್ರೀ ಎಸ.ಮಂಜುನಾಥರವರು ಸದರಿ ಮಾಹಿತಿಯನ್ನು ಅರ್ಜಿದಾರರಿಗೆ ಒದಗಿಸುವಂತೆ ಕಛೇರಿಯಿಂದ ಹಾಗೂ ಕರ್ನಾಟಕ ಮಾಹಿತಿ ಆಯೋಗದಿಂದ ಸುಮಾರು ಬಾರಿ ಸೂಚಿಸಲಾಗಿದ್ದರೊ ಸಹ ಎಸ. ಮಂಜುನಾಥ ಮಾಹಿತಿಯನ್ನು ಬದಗಿಸಿರುವುದಿಲ್ಲ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಮಾಹಿತಿ ಆಯೋಗ ಪ್ರಕರಣದಲ್ಲಿ ಕೋರಿರುವ ಮಾಹಿತಿ / ದಾಖಲೆ ಸಂಬಂಧ ಕರ್ನಾಟಕ ಪಬ್ಲಿಕ್ ರೆಕಾಡ್ ಆಕ್ಟ್ 2010 ಮತ್ತು ಕರ್ನಾಟಕ ಪಬ್ಲಿಕ್ ರೆಕಾರ್ಡ್ ರೂಲ್ಸ್ 2013 ರನ್ವಯ ಸದರಿ ಮಾಹಿತಿಗೆ ಸಂಬಂಧಿಸಿದ ಕಡತ ನಿರ್ವಹಿಸಿದ ಶ್ರೀ. ಎಸ್. ಮಂಜುನಾಥ , ಪ. ದ.ಸ ಲೆಕ್ಕ ಶಾಖೆ , ಶ್ರೀನಿವಾಸಪುರ ರವರ ಮೇಲೆ ಆರಕ್ಷಕ ಠಾಣೆಗೆ ಪ್ರಥಮ ಮಾಹಿತಿ ವರದಿ ದಾಖಲಿಸುವಂತೆ ಸೂಚಿಸುತ್ತ .

ಮಾಹಿತಿ ಹಕ್ಕು ಆಯೋಗ,  ಅಗತ್ಯ ಮಾಹಿತಿ ಒದಗಿಸಲು ವಿಫಲವಾಗಿರುವ ಎಸ್‌.ಮಂಜುನಾಥ ಅವರ ವಿರುದ್ಧ ಎಫ್ ‌ಐ ಆರ್ ದಾಖಲಿಸುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌ ಅವರಿಗೆ ಸೂಚಿಸಿತ್ತು. ಅದರಂತೆ ಎಸ್‌.ಆನಂದ್‌ ಶ್ರೀನಿವಾಸಪುರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಅನ್ವಯ ಎಸ್‌.ಮಂಜುನಾಥ ವಿರುದ್ಧ ಎಫ್‌ ಐ ಆರ್‌ ದಾಖಲಾಗಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...