ಲಾರಿ ರಿಕ್ಷಾ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Source: S.O. News Service | By MV Bhatkal | Published on 30th November 2017, 8:56 PM | Coastal News | Don't Miss |

ಭಟ್ಕಳ: ಚಲಿಸುತ್ತಿದ್ದ ಆಟೋ ರಿಕ್ಷಾವೊಂದಕ್ಕೆ ಎದುರಿನಿಂದ ಬಂದ ಮೀನು ಸಾಗಾಟದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ಗುರುವಾರ ಸಂಜೆ 4 ಗಂಟೆಯ ಸುಮಾರಿಗೆ ಇಲ್ಲಿನ ಟಿಎಫ್‍ಸಿ ಹೊಟೆಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
 ಗಾಯಗೊಂಡವರನ್ನು ರಿಕ್ಷಾ ಚಾಲಕ ತಾಲೂಕಿನ ಮುಠ್ಠಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ನಿವಾಸಿ ರಾಮಾ ನಾರಾಯಣ ನಾಯ್ಕ (33) ಎಂದು ಗುರುತಿಸಲಾಗಿದೆ. ತಲೆ ಹಾಗೂ ಸೊಂಟದ ಭಾಗಕ್ಕೆ ಬಲವಾದ ಏಟು ತಗುಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಸಾಗಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...