ಭಟ್ಕಳ ಬೆಳಕೆಯಲ್ಲಿ ಮೀನುಗಾರ ನೀರು ಪಾಲು

Source: S O News Service | Published on 22nd September 2020, 12:20 AM | Coastal News |

ಭಟ್ಕಳ: ಕಳೆದ ಎರಡು ದಿನಗಳಿಂದ ಭಾರಿ ಮಳೆಯ ಸಂದರ್ಭದಲ್ಲಿ ಪಾತಿ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೋರ್ವ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಬಿದ್ದು ದೋಣಿಯ ಸಮೇತ ನೀರುಪಾಲಾಗಿರುವ ಘಟನೆ ತಾಲೂಕಿನ ಬೆಳಕೆಯಲ್ಲಿ ನಡೆದಿದೆ.

ಮೃತರನ್ನು ಮಂಜುನಾಥ ಗೋಯ್ದ ಮೊಗೇರ (65) ಎಂದು ಗುರುತಿಸಲಾಗಿದೆ. ಇವರು ರವಿವಾರ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ್ದರು. ಸೋಮವಾರ ಬೆಳಿಗ್ಗೆ ಮೃತ ದೇಹವು ಹಡೀನ್ ಕಡಲ ತೀರದಲ್ಲಿ ಪತ್ತೆಯಾಗಿದೆ. 

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...