ಹೊನ್ನಾವರ : ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ಹೊನ್ನಾವರದಲ್ಲಿ ಮೀನುಗಾರರ ಬೃಹತ್ ಪ್ರತಿಭಟನೆ ನಡೆಸಿದರು.
ಉತ್ತರಕನ್ನಡ, ಉಡುಪಿ ಹಾಗೂ ಮಂಗಳೂರಿನಲ್ಲಿ ಮೀನುಗಾರಿಕೆ ಬಂದ್ ಮಾಡಿ ಯೋಜನೆ ವಿರೋಧ ಕಂಡುಬಂತು.
ಹೊನ್ನಾವರದ ಟೊಂಕದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಪೊಲೀಸ್ ಮೈದಾನದಲ್ಲಿ ಸಮಾವೇಶಗೊಂಡಿತು.
ರಾಷ್ಟ್ರೀಯ ಮೀನುಗಾರ ಸಂಘಟನೆ ಸೇರಿ ವಿವಿಧ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಹೊನ್ನಾವರದಲ್ಲಿ ನಡೆಯುತ್ತಿರುವ ವಾಣಿಜ್ಯ ಬಂದರು ಕಾಮಗಾರಿ ನಡೆಸುತ್ತಿರುವ ಕಂಪನಿ ಓಡಿಸಿ ಮೀನುಗಾರರನ್ನ ರಕ್ಷಿಸುವಂತೆ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಯು ಆರ್ ಸಭಾಪತಿ, ಮಾಜಿ ಶಾಸಕರಾದ ಮಂಕಾಳ ವೈದ್ಯ, ಶಾರದಾ ಶೆಟ್ಟಿ, ಜಿಲ್ಲಾ ಮೀನು ಮಾರಾಟ ಫೆಡರೇಶನ್ ಜಿಲ್ಲಾಧ್ಯಕ್ಷ ರಾಜು ತಾಂಡೇಲ, ರಾಮಾ ಮೊಗೇರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.