ಅಂಕೋಲಾದಲ್ಲಿ ಸಮುದ್ರದಲೆಗಳ ರಭಸಕ್ಕೆ ಮುಳುಗುತ್ತಿದ್ದ ಬೋಟ್: ಐವರ ರಕ್ಷಣೆ

Source: sonews | By MV Bhatkal | Published on 5th August 2018, 1:55 PM | Coastal News |

ಅಂಕೋಲಾ:ಮುಳುಗುತ್ತಿದ್ದ ಮೀನುಗಾರಿಕಾ ಬೋಟ್​ನಲ್ಲಿದ್ದ ಐವರು ಮೀನುಗಾರರನ್ನು ಇಬ್ಬರು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿರುವ ಘಟನೆ ಅಂಕೋಲಾ ತಾಲೂಕಿನ ಬೆಳಂಬಾರದಲ್ಲಿ ನಡೆದಿದೆ.
ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಕೃಷ್ಣರಾಮ ಬಾಣವಾಳೇಕರ್ ಎನ್ನುವವರಿಗೆ ಸೇರಿದ ರಾಮೇಶ್ವರ ಎಂಬ ಹೆಸರಿನ ಬೋಟ್ ಅಲೆಗಳ ರಭಸಕ್ಕೆ ಸಿಲುಕಿ ಬೆಳಂಬರ ಗ್ರಾಮದ ಬಳಿಯ ಸಮುದ್ರದಲ್ಲಿ ಮುಳುಗಡೆಯಾಗುತ್ತಿತ್ತು. ಇದರಲ್ಲಿ ಐವರು ಮೀನುಗಾರರಿದ್ದರು.
ಈ ವೇಳೆ ಸಮೀಪದಲ್ಲಿದ್ದ ಹಾರವಾಡದ ಶಾಂತದುರ್ಗಾ ಎಂಬ ಇನ್ನೊಂದು ಬೋಟ್​ನ ತುಕಾರಾಮ ವಿಠ್ಠಲ ಖಾರ್ವಿ ಮತ್ತು ಸಂತೋಷ ಧಾಕು ಖಾರ್ವಿ ಅಪಾಯದಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿದ್ದಾರೆ.

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...