ಪ್ರಕೃತಿ ವಿಕೋಪ ಪ್ರಾಥಮಿಕ ವರದಿ; ನೆರೆ ಹಾವಳಿಯಿಂದ 418.26 ಕೋಟಿ ಹಾನಿ-ಮನಿಷ್ ಮೌದ್ಗಿಲ್

Source: sonews | By Staff Correspondent | Published on 13th August 2019, 4:42 PM | Coastal News | Don't Miss |

ಕಾರವಾರ: ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಪ್ರಾಥಮಿಕ ವರದಿ ಪ್ರಕಾರ ಅಂದಾಜು ರೂ. 418. 26 ಕೋಟಿ ಹಾನಿಯಾಗಿದ್ದು, ಪರಿಹಾರ ಕಾರ್ಯವನ್ನು ಅತೀ ಶಿಘ್ರದಲ್ಲಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಷ್ ಮೌದ್ಗಿಲ್ ತಿಳಿಸಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ,  ಜಿಲ್ಲೆಯಲ್ಲಿ ನೆರೆ ಹಾವಳಿಯಿಂದಾಗಿ ಇದುರೆಗೆ 3257 ಮನೆಗಳು ಬಿದ್ದ ಬಗ್ಗೆ ವರದಿಯಾಗಿದ್ದು, ಸದರಿ ಮನೆಗಳ ಮಾಲಿಕರಿಗೆ ಪರಿಹಾರ ವಿತರಿಸುವ ಪ್ರಕ್ರೀಯೆ ಪ್ರಗತಿಯಲ್ಲಿರುತ್ತದೆ. ಅಲ್ಲದೇ ಮನೆ ಹಾನಿಯಾದಂತಹ ಸಂತ್ರಸ್ತ ಕುಟುಂಬಳಿಗೆ 3800 ರೂಪಾಯಿಗಳ ಪರಿಹಾರವನ್ನು ವಿತರಿಸುವ ಕಾರ್ಯ ಪ್ರಗತಿಯಲ್ಲಿದ್ದು, ಮಂಗಳವಾರದೊಳಗಾಗಿ ಮುಕ್ತಾಯಗೊಳಿಸಲಾಗುವುದು ಎಂದು ಅವರು ಹೇಳಿದರು.    

ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕೆ. ಮಾತನಾಡಿ ಮುಂದಿನ 48 ಗಂಟೆಗಳಲ್ಲಿ ವಿದ್ಯುತ್, ರಸ್ತೆ, ದೂರವಾಣಿ ನೆಟ್‍ವರ್ಕ ಹೀಗೆ ವಿವಿಧÀ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ. ಚಿಗಳ್ಳಿ ಡ್ಯಾಮ್ ಬಿರುಕು ಬಿಟ್ಟಿದ್ದರಿಂದಾಗಿ ಹೆಚ್ಚು ಕೃಷಿ ಭೂಮಿ ಹಾನಿಗೊಳಗಾಗಿದೆ. ರಸ್ತೆ ಸಂಪರ್ಕಕ್ಕೆ ಆಧ್ಯತೆ ಕೊಟ್ಟು ಸರಿಪಡಿಸಿಕೊಂಡು ಆಗಸ್ಟ್ 16 ರ ನಂತರ ಬೆಳೆ ಸಮೀಕ್ಷೆ ಮಾಡಲಾಗುವುದು.  ಸದ್ಯದ ಪರಿಸ್ಥಿತಿಯಲ್ಲಿ ಸ್ವಚ್ಛತೆ, ಆರೋಗ್ಯ, ಕುಡಿಯುವ ನೀರಿನ ಕಡೆ ಹೆಚ್ಚು ಗಮನಹರಿಸಲಾಗುವುದು ಎಂದರು.  

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ ರೋಷನ್ ಮಾತನಾಡಿ 14ನೇ ಹಣಕಾಸು ಯೋಜನೆಯಡಿ ಇರುವ ಹಣವನ್ನು, ಗ್ರಾಮಪಂಚಾಯತ್ ಮಟ್ಟದ ರಸ್ತೆ ಅಭಿವೃದ್ಧಿ, ಚರಂಡಿ ವ್ಯವಸ್ಥೆ ಹೀಗೆ ಮುಂತಾದ ಕಾರ್ಯಗಳಿಗಾಗಿ ವಿನಿಯೋಗಿಸಲಾಗುವುದು. ಈ ಕುರಿತಾಗಿ ಗ್ರಾಮ ಪಂಚಾಯತ್‍ಗಳಲ್ಲಿ ತುರ್ತು ಸಭೆಯನ್ನು ಕೈಗೊಳ್ಳುವಂತೇ ಸೂಚಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಅನಾರೋಗ್ಯದಿಂದ ಬಳಲುತ್ತಿರುವ ನೆರೆಪೀಡಿತ 29,216 ಜನರಿಗೆ ಔಷಧಿಗಳನ್ನು ಒದಗಿಸಿದ್ದೇವೆ. ಕುಡಿಯುವ ನೀರಿನ ಸೌಲಭ್ಯ ತಲೆದೋರುತ್ತಿದ್ದು, ಶೀಘ್ರ ಕ್ರಮ ಕೈಗೊಳ್ಳುತ್ತೇವೆ. ಮಹಿಳಾ ಮತ್ತು ಮಕ್ಕಳ ಇಲಾಖೆಯ ವತಿಯಿಂದ ಸಂತ್ರಸ್ತರ ಕ್ಷೇಮಾಭಿವೃದ್ಧಿ ಹಾಗೂ ಅವರಿಗೆ ಸಾಂತ್ವಾನ ಹೇಳಲು ಜಿಲ್ಲೆಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಲಾಗಿದೆ. ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿ ಸದಸ್ಯರ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿದ್ದೇವೆ ಎಂದರು.

ಜಿಲ್ಲಾ ಪೊಲೀಸ್‍ವರಿಷ್ಠಾಧಿಕಾರಿ  ವಿನಾಯಕ ಪಾಟೀಲ್ ಮಾತನಾಡಿ, ನೆರೆಹಾವಳಿಯಿಂದ ಸಿಲುಕಿಹಾಕಿಕೊಂಡ ಜನರನ್ನು ನೌಕಾನೆಲೆಯ ರಕ್ಷಣಾ ತಂಡ, ಕರಾವಳಿ ಭದ್ರತಾ ಪಡೆ, ಅಗ್ನಿಶಾಮಕ ತಂಡ, ಜಿಲ್ಲಾ ಕಡಲತೀರ ಪ್ರದೇಶಾಭಿವೃಧ್ಧಿ ಸಮೀತಿಯ ದೋಣಿಗಳು ಹಾಗೂ ಮೀನುಗಾರರ ದೋಣಿಗಳು ನೆರೆಸಂತ್ರಸ್ತರ ರಕ್ಷಣೆ ಮಾಡುವಲ್ಲಿ ಸಹಕರಿಸಿವೆ. ಯಾರಿಗೂ ಜೀವ ಹಾನಿಯಾಗಬಾರದೆನ್ನುವುದು ನಮ್ಮ ಗುರಿಯಾಗಿತ್ತು. ಅದರಂತೆ ಸಾಧ್ಯವಾದಷ್ಟು ಮಟ್ಟಿಗೆ ಯಶಸ್ಸು ಕೂಡಾ ಆಗಿರುತ್ತದೆ. ಮುಳಗಡೆಯಾದ 113 ಗ್ರಾಮಗಳ 6200 ಜನರನ್ನು ಸುರಕ್ಷಿತ ಸ್ಥಳಗಳಿಗೆ ತಲುಪಿಸಲಾಗಿರುತ್ತದೆ ಎಂದು ಹೇಳಿದರು.  

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...