ಕಾರವಾರ : ತಾಲೂಕಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಜನರ ರಕ್ಷಣೆಗಾಗಿ ಇಂಡಿಯನ್ ಕೋಸ್ಟ್ ಗಾರ್ಡ್ ಧಾವಿಸಿದೆ. ಕಾರವಾರ ಕಾಳಿ ನದಿ ಪ್ರದೇಶದಲ್ಲಿ ಸಿಲುಕಿಕೊಂಡ 155ಕ್ಕೂ ಹೆಚ್ಚು ಜನರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.
ತಾಲೂಕಿನ ಕಾಳಿ ನದಿ ಪ್ರದೇಶದ ಕದ್ರಾ, ಖಾರ್ಗೆಜೂಗ್, ಉಮಳೆಜೂಗ್ ಸೇರಿದಂತೆ ಇತರ ಕಡೆಗಳಲ್ಲಿ ಸಿಲುಕಿದ ಜನರ ರಕ್ಷಣೆ ಮಾಡಲಾಗಿದೆ.
ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಬ್ಬರ್ ಬೋಟ್ ಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.