ಭಟ್ಕಳ: ಇಲ್ಲಿನ ಮಾವಳ್ಳಿ-1ರ ಗ್ರಾಮೀಣ ವ್ಯವಸಾಯ ಸಹಕಾರಿ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುವ ನ್ಯಾಯಬೆಲೆ ಅಂಗಡಿಯಲ್ಲಿ ಕಳೆದ 2 ವರ್ಷದಿಂದ ಇದರ ವ್ಯಾಪ್ತಿಯ ಪಡಿತದಾರರಿಗೆ ರೇಶನ್ ವಿತರಿಸಲು ಸಮಸ್ಯೆಯಾಗುತ್ತಿದ್ದು, ಇದರಿಂದಾಗಿ ತಿಂಗಳ ಪ್ರತಿದಿನವೂ ಮುಂಜಾನೆ 4 ಗಂಟೆಗೆ ಸರದಿ ಸಾಲಿನಲ್ಲಿ ನಿಂತು ರೇಶನ ಪಡೆಯಬೇಕಾಗಿದೆ.
ಇಲ್ಲಿನ ಮಾವಳ್ಳಿ 1- ಹಾಗೂ 2 ಗ್ರಾಮ ಪಂಚಾಯತ್ ವ್ಯಾಪ್ತಿಯ ಒಟ್ಟು 25 ಮಜಿರೆಯ 17,062 ಜನಸಂಖ್ಯೆಯುಳ್ಳ ಪ್ರದೇಶಕ್ಕೆ 30ದಿನದೊಳಗಾಗಿ ರೇಶನ ವಿತರಿಸುವುದು ಅಸಾಧ್ಯದ ಮಾತಾಗಿದೆ. ಕಳೆದ 2-3 ವರ್ಷದಿಂದ ರೇಶನ ವಿತರಣೆಯಲ್ಲಿ ಪಡಿತರದಾರರಿಗೆ ಕಿರಿಕಿರಿಯಾಗುತ್ತಿದ್ದು, ರೇಶನ ವಿತರಿಸುತ್ತಿರುವ ಗ್ರಾಮೀಣ ವ್ಯವಸಾಯ ಸಹಕಾರಿ ಸಂಘವೂ ಜನರಿಗಾಗುವ ಹಾಗೂ 30 ದಿನದಲ್ಲಿ ವಿತರಿಸಲು ರೇಶನ ಅಂಗಡಿದಾರರಿಗೆ ಭಾರಿ ಒತ್ತಡವಾಗುತ್ತಿರುವ ಬಗ್ಗೆ ಸಂಘದ ಸಭೆಯಲ್ಲಿ ಸದಸ್ಯರ ಒಮ್ಮತದೊಂದಿಗೆ ಠರಾವು ಮಾಡದೇ ಸಮಸ್ಯೆಯನ್ನು ಮೈಮೇಲೆ ಹಾಕಿಕೊಳ್ಳುತ್ತಿದ್ದಾರೆ.
ಈ ಹಿಂದೆ ಇಲ್ಲಿ ಇರುವ ಆಯಾ ಎರಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ್ಯಾಯಬೆಲೆ ಅಂಗಡಿಯಿದ್ದು, ಆಗ ಮಾವಳ್ಳಿ-2ರಲ್ಲಿ ಖಾಸಗಿಯವರು ನಡೆಸಿಕೊಂಡು ಬರುತ್ತಿದ್ದ ವೇಳೆ ಕೆಲವು ಸಮಸ್ಯೆಯಿಂದ ಮುಚ್ಚಿ ಈಗ ಮಾವಳ್ಳಿ-1 ರಲ್ಲಿಯೇ ಒಂದೇ ಕಡೆ ಎರಡು ಪಂಚಾಯತ್ ವ್ಯಾಪ್ತಿಯ ರೇಶನ್ ವಿತರಣೆ ಮಾಡುತ್ತಿದ್ದು, ಆದರೆ ಜನರಿಗೆ ಪಡಿತರ ಪಡೆದುಕೊಳ್ಳುವುದೇ ಇನ್ನಷ್ಟು ತೊಂದರೆಯಾಗುತ್ತಿದೆ.
ಮಾವಳ್ಳಿ-1 ಗ್ರಾಮ ಪಂಚಾಯತನಲ್ಲಿ 13 ಮಜಿರೆಯಿಂದ 10,439 ಜನಸಂಖ್ಯೆಯಿದ್ದು, ಅದೇ ರೀತಿ ಮಾವಳ್ಳಿ-2 ಗ್ರಾಮ ಪಂಚಾಯತನಲ್ಲಿ 12 ಮಜಿರೆಯಿಂದ 6,623 ಜನಸಂಖ್ಯೆಯಿದೆ. ಸದ್ಯ ಮಾವಳ್ಳಿ-1 ಗ್ರಾಮೀಣ ವ್ಯವಸಾಯ ಸಹಕಾರಿ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುವ ನ್ಯಾಯಬೆಲೆ ಅಂಗಡಿಯಲ್ಲಿ ರೇಶನ ವಿತರಿಸುವ ಕೇಂದ್ರಕ್ಕೆ ಮಾವಳ್ಳಿ-2 ವ್ಯಾಪ್ತಿಯ ದೂರದ ಗ್ರಾಮೀಣ ಪ್ರದೇಶವಾದ ಇಲ್ಲಿನ ಕೋಟದಮಕ್ಕಿ, ಕೋಡ್ಸುಲು, ಮೀಡ್ಲು, ಹಡಾಲ್ ಸೇರಿದಂತೆ ಒಟ್ಟು 10-15 ಕಿ.ಮೀ. ದೂರದ ಜನರು ಬರಬೇಕಾಗಿದ್ದು, ಈಗಿನ ಬಯೋಮೇಟ್ರಿಕ ವ್ಯವಸ್ಥೆಯಿಂದ ಜನರು ಸರದಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಬಯೋಮೆಟ್ರಿಕ್ ವ್ಯವಸ್ಥೆಯಿಂದ ಪಡಿತರದಾರಿಗೆ ದಿನದಲ್ಲಿ 40ರಿಂದ 50 ಮಂದಿಗೆ ಮಾತ್ರ ರೇಶನ ವಿತರಿಸಲು ಸಾಧ್ಯವಾಗುತ್ತಿದ್ದು, ಒಂದು ವೇಳೆ ಸರ್ವರ ಸಮಸ್ಯೆಯಿಂದ ಬಯೋಮೆಟ್ರಿಕ್ನಲ್ಲಿ ಏನಾದರು ಸಮಸ್ಯೆಯುಂಟಾದರೆ ದೂರದ ಪ್ರದೇಶದಿಂದ ಬಂದವರು ರೇಶನ ಪಡೆಯದೇ ಹಿಂದಿರುಗಬೇಕಾಗುತ್ತದೆ. ರೇಶನ ಸಿಗದ ಹಿನ್ನೆಲೆಯಲ್ಲಿ ದೂರದ ಪ್ರದೇಶದ ಜನರು ರೇಶನ್ ಪಡೆಯಲು ಮುಂಜಾನೆ 4ಗಂಟೆಗೆ ಬಂದು ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಬಗ್ಗೆ ಮಾವಳ್ಳಿ-2 ಗ್ರಾಮ ಪಂಚಾಯತ್ ಸಹ ಸಾಮನ್ಯ ಸಬೆಯಲ್ಲಿ ರೇಶನ ವಿತರಣೆಯಲ್ಲಿ ಜನರಿಗಾಗುತ್ತಿರುವ ಸಮಸ್ಯೆಯ ಬಗ್ಗೆ ಠರಾವು ಮಾಡಿ ಇಲಾಖೆಗೆ ಕಳುಹಿಸಿ ಆ ಮೂಲಕ ಒತ್ತಡ ಹಾಕಿ ಸಮಸ್ಯೆಯನ್ನು ಪರಿಹರಿಸಕೊಳ್ಳಬಹುದಾಗಿದೆ.
ಜವಾಬ್ದಾರಿ ವಹಿಸಬೇಕಾಗಿದೆ ವ್ಯವಸಾಯ ಸಹಕಾರಿ ಸಂಘ: ಸದ್ಯ ರೇಶನ ಪಡೆಯಲು ಎರಡು ಪಂಚಾಯತ್ ಜನರು ಮಾವಳ್ಳಿ-1ಕ್ಕೆ ಬರಬೇಕಾಗಿದ್ದು, ಪಡಿತರ ಸಿಗದೇ ಕಾಯಬೇಕಾಗಿದೆ. ಎರಡು ಪಂಚಾಯತ್ ಜನರಿಗೆ ಒಂದೇ ನ್ಯಾಯಬೆಲೆ ಅಂಗಡಿಯಲ್ಲಿ ರೇಶನ ವಿತರಿಸಲು ಸಾಧ್ಯವಾಗುತ್ತಿಲ್ಲ ಇದರಿಂದ ಜನರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ಸಂಘದ ಸದಸ್ಯರನ್ನೊಳಗೊಂಡ ಸಭೆಯಲ್ಲಿ ಒಮ್ಮತದಿಂದ ಠರಾವು ಮಾಡಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ಕಳುಹಿಸಿ ಸಮಸ್ಯೆಯ ಜವಾಬ್ದಾರಿ ಹೊತ್ತು ಇತ್ಯರ್ಥ ಮಾಡಬೇಕಾಗಿದೆ.
ಜಿಲ್ಲಾಧಿಕಾರಿಗಳೇ ಇತ್ತ ಕಡೆ ಸ್ವಲ್ಪ ಗಮನ ನೀಡಿ: 10-15 ಕಿ.ಮೀ. ದೂರದ ಗ್ರಾಮೀಣ ಪ್ರದೇಶದಿಂದ ಜನರು ಪಡಿತರಕ್ಕಾಗಿ ಕಾದು ಕುಳಿತುಕೊಳ್ಳಬೇಕಾಗಿದ್ದು, ಪಡಿತರರಿಗಾಗುವ ತೊಂದರೆಯ ಬಗ್ಗೆ ಆಹಾರ ಇಲಾಖೆಯಿಂದ ಮಾಹಿತಿ ಪಡೆದು ಸಮರ್ಪಕ ರೀತಿಯಲ್ಲಿ ಪಡಿತರಕ್ಕಾಗಿ ಜನರು ಕಾಯದೇ ಪಡೆದುಕೊಳ್ಳುವ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
'ಎರಡು ಪಂಚಾಯತ್ ವ್ಯಾಪ್ತಿಯ ಜನರಿಗೆ ಒಂದೇ ಕಡೆ ರೇಶನ ಪಡೆಯಲು ಸಮಸ್ಯೆಯಾಗುತ್ತಿದ್ದು, ಈ ಮೂಲಕ ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತಿದ್ದು, ಮಾವಳ್ಳಿ-2 ಪಂಚಾಯತ್ ವ್ಯಾಪ್ತಿಯ ಜನರಿಗೆ ಅನೂಕುಲವಾಗುವಂತೆ ಅದರ ವ್ಯಾಪ್ತಿಯಲ್ಲಿಯೇ ಸೂಕ್ತ ಕಟ್ಟಡವನ್ನು ಇಲಾಖೆಯ ಮೂಲಕ ನಿಗದಿ ಪಡಿತರ ವಿತರಣೆ ಅನೂಕುಲ ಮಾಡಿಕೊಡಬೇಕೆಂದು ಕೃಷ್ಣ ನಾಯ್ಕ ಜಮೀನ್ದಾರ್- ಮಾವಳ್ಳಿ-1 ಪಂಚಾಯತ್ ಸದಸ್ಯ ಮನವಿ ಮಾಡಿದರು
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಪೌರಕಾರ್ಮಿಕರ ಮೊಗದಲ್ಲಿ ಸಂತೃಪ್ತಿಯ ಭಾವ ಮೂಡಿಸಿದ ಖಾಯಂ ನೇಮಕಾತಿ ಆದೇಶ
ಅಲ್ಲಿ ನೆರದಿದ್ದವರು ಎಂದಿನಂತಿನ ಸಾಮಾನ್ಯ ದಿನಗಳಂತೆ ಬೇಸರದ ಮನಸ್ಥಿತಿಯಲ್ಲಿರಲಿಲ್ಲ, ಶುಭ್ರ ವಸ್ತçದಾರಿಗಳಾಗಿದ್ದ ಅವರ ...
ಪಂಚಾಯತ್ ಸೇವೆಗಳನ್ನು ಪಡೆಯಲು ಬಂದಿದೆ ಪಂಚಮಿತ್ರ ವಾಟ್ಸಾಪ್
ಸರ್ಕಾರದ ಹಲವು ಇಲಾಖೆಗಳು ಆನ್ಲೈನ್ ಮೂಲಕ ಸಾರ್ವಜನಿಕರಿಗೆ ತಮ್ಮ ಕೈ ಬೆರಳಿನಲ್ಲಿಯೇ ತಮಗೆ ಅಗತ್ಯವಿರುವ ಸೇವೆಗಳನ್ನು ಪಡೆಯಲು ...
ಇಡಿ ಭಯದಿಂದ ಬಿಜೆಪಿಗೆ ₹335 ಕೋಟಿ ದೇಣಿಗೆ ನೀಡಿದ 30ಕ್ಕೂ ಅಧಿಕ ಕಂಪನಿಗಳು
ಈ ಮಹತ್ವದ ಸಂಗತಿಯನ್ನು ‘ದಿ ನ್ಯೂಸ್ ಮಿನಿಟ್’ ಹಾಗೂ ‘ನ್ಯೂಸ್ ಲಾಂಡ್ರಿ‘ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ತಮ್ಮ ತನಿಖಾ ವರದಿಯಲ್ಲಿ ...
ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?
ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...
ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ
ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...
ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ
ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...