ಅರಣ್ಯ ಭೂಮಿ ಹಕ್ಕು- ದಾನ ಮತ್ತು ಭಿಕ್ಷಾ ಅಲ್ಲ; ಸಂವಿಧಾನ ಬದ್ಧ ಹಕ್ಕು: ರವೀಂದ್ರ ನಾಯ್ಕ.

Source: Press release | By I.G. Bhatkali | Published on 6th February 2023, 5:13 PM | Coastal News | Don't Miss |

ಸಿದ್ಧಾಪುರ: ವಾಸ್ತವ್ಯ ಮತ್ತು ಜೀವನಕ್ಕಾಗಿ ಅರಣ್ಯ ಭೂಮಿಯನ್ನ ಅವಲಂಭಿತವಾಗಿರುವ ಅರಣ್ಯವಾಸಿಗಳಿಗೆ ನೀಡುವ ಅರಣ್ಯ ಭೂಮಿ ಹಕ್ಕು ಧಾನ ಅಥವಾ ಬಿಕ್ಷೆಯಲ್ಲ. ಸಂವಿಧಾನ ಬದ್ಧ ಹಕ್ಕು. ಸರಕಾರ ಗಂಭೀರವಾಗಿ ಚಿಂತನೆ ಮಾಡಬೇಕೆಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

 ಅವರು ದಿ. ೫ ರಂದು ಸಿದ್ಧಾಪುರ ತಾಲೂಕಿನ ನಿಲ್ಕುಂದ, ಹೆಗ್ಗರಣಿ, ತಂಡಾಗುAಡಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಂಗಳೂರು ಚಲೋ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

 ವಾಸ್ತವ್ಯ ಮತ್ತು ಭೂಮಿ ಹಕ್ಕು ನೀಡುವಂತದ್ದು ಸರಕಾರದ ಮೂಲಭೂತ ಕರ್ತವ್ಯವಾಗಿದ್ದು, ಈ ದಿಶೆಯಲ್ಲಿ ಸರಕಾರ ಕಾನೂನು ಬದ್ಧವಾಗಿ ಚಿಂತಿಸದೇ ಇರುವುದು ಖೇದಕರ ಎಂದು ಅವರು ಹೇಳುತ್ತಾ ಭೂಮಿ ಹಕ್ಕು ನೀಡುವಲ್ಲಿ ಸುಫ್ರೀಂ ಕೋರ್ಟಿಗೆ ಅರಣ್ಯವಾಸಿಗಳ ಪರವಾಗಿ ಸರಕಾರ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಅವರು ತಿಳಿಸಿದರು.

 ಸಭೆಯಲ್ಲಿ ಹರಿಹರ ನಾಯ್ಕ ಸ್ವಾಗತಿಸಿದರು. ಸೀತಾರಾಮ ಹುಲಿಯ ಗೌಡ, ಮಾಬ್ಲೇಶ್ವರ ಕೃಷ್ಣಪ್ಪ ನಾಯ್ಕ, ದ್ಯಾವ ಗೌಡ, ಲಿಂಗು ಗೌಡ, ಮಂಜುನಾಥ ನಾಯ್ಕ, ಭದ್ರ ಗೌಡ, ಎಮ್ ಪಿ ಗೌಡ, ಮಧುಕೇಶ್ವರ ನಾಯ್ಕ, ಈಶ್ವರ ಮರ‍್ಯಾ ನಾಯ್ಕ, ಅಬ್ಬಾಸ್, ತಮ್ಮಾಣಿ ಗೌಡ ಹುಕ್ಕಳಿ, ವಿನೋಧ ಗೌಡ, ಕೃಷ್ಣ ನಾಯ್ಕ ಗೋರೆಬೈಲ್, ರಾಮಚಂದ್ರ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

ತೀವ್ರ ಹೋರಾಟಕ್ಕೆ ಚಾಲನೆ:
 ಅರಣ್ಯ ಭೂಮಿ ಹಕ್ಕಿಗಾಗಿ ಹೋರಾಟಗಾರರ ವೇದಿಕೆಯು ವ್ಯಾಪಕವಾದ ಹೋರಾಟಕ್ಕೆ ಚಾಲನೆ ನೀಡಿದ್ದು, ಭೂಮಿ ಹಕ್ಕಿಗಾಗಿ ಕಾನೂನಾತ್ಮಕ ಹೋರಾಟವನ್ನು ಸಹಿತ ತೀವ್ರಗೊಳಿಸುವುದೆಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...