ಕಾರವಾರ : ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರವಾರ, ಅಂಕೋಲಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.
ಕಾರವಾರ ತಾಲೂಕಿನ ಕದ್ರಾ, ಗಾಂಧಿನಗರ, ಲಕ್ಷ್ಮೀನಗರ, ಮಲ್ಲಾಪುರ ಭಾಗಗಳಿಗೆ ಭೇಟಿ ನೀಡಿದ ಅವರು ಪರಿಶೀಲನೆ ನಡೆಸಿದರು. ಈ ವೇಳೆ ಮನೆ ಕಳೆದುಕೊಂಡ ಸಂತ್ರಸ್ಥರು ತಮ್ಮ ಅಳಲು ತೋಡಿಕೊಂಡರು.
ಈ ವೇಳೆ ಕೆಪಿಸಿ ಅಧಿಕಾರಿಗಳ ಸಭೆ ನಡೆಸಿದ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಜನರಿಗೆ ಮಾಹಿತಿ ನೀಡದೇ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿರುವುದಕ್ಕೆ ತರಾಟೆಗೆ ತೆಗೆದುಕೊಂಡರು.
ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳು ಏಕಾಏಕಿ ನೀರು ಬಿಡುಗಡೆ ಮಾಡಿರೋದು ಗಮನಕ್ಕೆ ಬಂದಿದೆ. ಹೀಗಾಗಿ ಬಡವರು ಮನೆಗಳನ್ನ ಕಳೆದುಕೊಂಡಿದ್ದಾರೆ. ಸರ್ಕಾರದ ಗಮನಕ್ಕೆ ತರಲಾಗುವುದು ಎಂದಿದ್ದಾರೆ. 2019ರಲ್ಲಿ ಪ್ರವಾಹ ಉಂಟಾಗಿ ಇದುವರೆಗೆ ಪರಿಹಾರ ದೊರೆತಿಲ್ಲ. ಸರ್ಕಾರ ಎಲ್ಲಾ ಸಂತ್ರಸ್ತರಿಗೆ ಪರಿಹಾರ ಒದಗಿಸಬೇಕೆಂದರು. ಮಾಜಿ ಸಚಿವ ಆರ್ ವಿ ದೇಶಪಾಂಡೆ, ಮಾಜಿ ಶಾಸಕರಾದ ಸತೀಶ ಸೈಲ್, ಮಂಕಾಳ ವೈದ್ಯ ಸೇರಿ ಇತರರು ಇದ್ದರು.