ಕೋಲಾರ: ಮಲ್ಲಸಂದ್ರದಲ್ಲಿ ೪ ಕೋಟಿ ವೆಚ್ಚದ ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

Source: Shabbir Ahmed | Published on 1st October 2021, 12:16 AM | State News |

ಕೋಲಾರ : ತಾಲೂಕಿನ ಮಲ್ಲಸಂದ್ರ ಗ್ರಾಮ , ಹೊಸಹಳ್ಳಿ ಬೈರನಹಳ್ಳಿಯ ಮಾರ್ಗದ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ೪ ಕೋಟಿ ರೂ.ವೆಚ್ಚದಲ್ಲಿ ೭೫ ಕಿ.ಮೀ ರಸ್ತೆ ಕಾಂಗಾರಿಗೆ ಶಾಸಕ ಕೆ.ಶ್ರೀನಿವಾಸಗೌಡ , ಎಂಎಲ್‌ಸಿ ಇಂಚರ ಗೋವಿಂದರಾಜು ಅವರು ಗುದ್ದಲಿ ಪೂಜೆ ನೇರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ.ಶ್ರೀನಿವಾಸಗೌಡ , ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಾದರೆ ಇಡೀ ದೇಶ ಅಭಿವೃದ್ದಿಯಾಗುತ್ತದೆ.

ಎಂಎಲ್ಸಿ ಇಂಚರ ಗೋವಿಂದರಾಜು ಮಾತನಾಡಿ, ಗ್ರಾಮಗಳಲ್ಲಿ ರಸ್ತೆಗಳನ್ನ ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಗ್ರಾಮಸ್ಥರು ಗುಣಮಟ್ಟವನ್ನು ಪರಿಶೀಲಿಸಬೇಕು. ಗುತ್ತಿಗೆದಾರರು ಸಹ ಮಾಡುವ ಕೆಲಸದಲ್ಲಿ ಪ್ರಮಾಣಿಕತೆ ತೋರಿಸಿದರೆ ಅವರಿಗೆ ಒಳ್ಳೆಯ ಹೆಸರು ಬರುತ್ತದೆ ಎಂದರು .

ಈ ಸಂದರ್ಭದಲ್ಲಿ ನಾಗನಾಳ ಸೋಮಣ್ಣ , ಸಿಎಂಆರ್.ಶ್ರೀನಾಥ್ , ಮಲ್ಲಸಂದ್ರ ಎನ್ . ಬಚ್ಚಣ್ಣ , ಮಲ್ಲಸಂದ ಜಗಧೀಶ್ , ಕುರ್ಕಿರಾಜೇಶ್ವರಿ , ಎಂಡಿ.ದೇವರಾಜ್ , ತಿರುಮಲೇಶ್ , ಆನಂದ್ , ಖಾಜಿಕಲ್ಲಹಳ್ಳಿ ಹರೀಶ್‌ಗೌಡ , ಚಿಕ್ಕವೀರಪ್ಪ ಗುತ್ತಿಗೆದಾರ ವೆಂಕಟರಾಮರೆಡ್ಡಿ ಮತ್ತಿತರರು ಹಾಜರಿದ್ದರು .

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...