ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 4 ನಾಮಪತ್ರ ಸಲ್ಲಿಕೆ

Source: S O News | By I.G. Bhatkali | Published on 16th April 2024, 9:20 PM | Coastal News | Don't Miss |

ಕಾರವಾರ: 12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ಜಿಲ್ಲೆಯಲ್ಲಿ 3 ಅಭ್ಯರ್ಥಿಗಳಿಂದ ಒಟ್ಟು 4 ನಾಮಪತ್ರಗಳು ಸಲ್ಲಿಕೆಯಾಗಿವೆ. 

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ (2 ನಾಮಪತ್ರ), ಉತ್ತಮ ಪ್ರಜಾಕೀಯ ಪಕ್ಷದ ಸುನೀಲ್ ಪವಾರ್ ಹಾಗೂ ಪಕ್ಷೇತರ ಅಭ್ಯರ್ಥಿ ನಾಗರಾಜ ಶಿರಾಲಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. 

ಜಿಲ್ಲೆಯಲ್ಲಿ ಇದುವರೆಗೆ 10 ಅಭ್ಯರ್ಥಿಗಳಿಂದ 14 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದ್ದು, 20 ರಂದು ನಾಮಪತ್ರಗಳ ಪರಿಶೀಲನೆ, 22 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 7 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ. 

Read These Next