ಆಟವಾಡುತ್ತಿದ್ದ ಬಾಲಕ ಮಳೆನೀರು ಹರಿಯುವ ಕಾಲುವೆಗೆ ಬಿದ್ದು ಸಾವು

Source: SO NEWS | By MV Bhatkal | Published on 22nd May 2022, 12:21 AM | Coastal News | Don't Miss |

ಭಟ್ಕಳ: ಅಂಗನವಾಡಿಗೆ ಹೋಗಿ ಬಂದಿದ್ದ ಬಾಲಕನೋರ್ವ ಮನೆಯ ಹಿಂದುಗಡೆ ಆಟವಾಡುತ್ತಾ ಇರುವಾಗ ಮಳೆ ನೀರಿನ ಕಾಲುವೆಯಲ್ಲಿ ಬಿದ್ದು ನೀರು ಕುಡಿದು ಮೃತಪಟ್ಟ ಘಟನೆ ತಾಲೂಕಿನ ಪಡುಶಿರಾಲಿಯಲ್ಲಿ ಸಂಭವಿಸಿದೆ. 
ಮೃತ ಬಾಲಕನನ್ನು ವಿಜೇತ ಗಣಪತಿ ನಾಯ್ಕ (೪ ವರ್ಷ) ಎಂದು ಗುರುತಿಸಲಾಗಿದೆ. ಈತನು ಅಂಗನವಾಡಿಗೆ ಹೋಗಿದ್ದು ಮೇ.೨೦ರಂದು ಮಧ್ಯಾಹ್ನ ಮನೆಗೆ ಬಂದಿದ್ದು ತಾಯಿ ಮನೆಗೆಲಸದಲ್ಲಿರುವಾಗ ಮನೆಯ ಹಿಂದುಗಡೆ ಆಟವಾಡಿಕೊಂಡಿದ್ದ ಎನ್ನಲಾಗಿದೆ. ಅಕಸ್ಮಾತ್ ಮಳೆನೀರು ಹರಿಯುವ ಕಾಲುವೆಗೆ ಬಿದ್ದ ಈತ ನೀರು ಕುಡಿದಿದ್ದು ತಕ್ಷಣ ಗಮನಿಸಿದ ತಾಯಿ ಆತನನ್ನು ಶಿರಾಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದಾಗ ವೈದ್ಯರು ಮೃತ ಪಟ್ಟಿರುವ ಬಗ್ಗೆ ತಿಳಿಸಿದ್ದಾರೆನ್ನಲಾಗಿದೆ.  
ಮಗುವಿನ ಶವ ಆಸ್ಪತ್ರೆಗೆ ಸಾಗಾಣೆ ಮಾಡಿದ್ದು, ಸಂಬಂಧಿಕರ ಆಕ್ರಂದನ ಮಗಿಲು ಮುಟ್ಟಿದೆ.
ಈ ಕುರಿತು ಮೃತ ಬಾಲಕನ ತಂದೆ ಗಣಪತಿ ಕೃಷ್ಣಾ ನಾಯ್ಕ ಮುರ್ಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದು ದೂರನ್ನು ದಾಖಲಿಸಿಕೊಂಡ ಸಬ್ ಇನ್ಸ್ಪೆಕ್ಟರ್ ಪರಮಾನಂದ ಕೊಣ್ಣೂರ ತನಿಖೆ ನಡೆಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...