ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ: 2019-20ನೇ ಸಾಲಿನ ಎಸ್.ಸಿ.ಪಿ./ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ಐ.ಬಿ.ಪಿ.ಎಸ್. ಬ್ಯಾಂಕಿಂಗ್ ಪರೀಕ್ಷೆಗಳಿಗೆ ನುರಿತ ತರಬೇತಿ ಸಂಸ್ಥೆಯ ಮೂಲಕ ಉಚಿತವಾಗಿ 60 ದಿನಗಳ ಪೂರ್ವಭಾವಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಫೆ.27ರೊಳಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ್ನ ಪ್ರತಿ ಇನ್ನಿತರ ದಾಖಲಗಳೊಂದಿಗೆ ಕಾರವಾರದ ಯೋಜನಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 08382-226386 ಸಂಖ್ಯೆಗೆ ಕರೆಮಾಡಿ ಮಾಹಿತಿಪಡೆಯಬಹುದಾಗಿದೆ