ಕೆಲ ನಾಯಕರಿಂದ ಜಿ-23 ದುರುಪಯೋಗ'; ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಬೇಕು: ವೀರಪ್ಪ ಮೊಯ್ಲಿ

Source: PTI | By MV Bhatkal | Published on 12th September 2021, 7:26 PM | National News | Don't Miss |

ನವದಹೆಲಿ: ಕೆಲವು ನಾಯಕರು ಜಿ -23 ಅನ್ನು "ದುರುಪಯೋಗ" ಪಡಿಸಿಕೊಂಡಿದ್ದಾರೆ ಎಂದಿರುವ ಹಿರಿಯ ಕಾಂಗ್ರೆಸ್ ನಾಯಕ ಎಂ.ವೀರಪ್ಪ ಮೊಯ್ಲಿ ಅವರು ಸೋನಿಯಾ ಗಾಂಧಿ ಅವರ ನಾಯಕತ್ವದಲ್ಲಿ ಈಗಾಗಲೇ ಪಕ್ಷದ ಸುಧಾರಣೆ ನಡೆಯುತ್ತಿರುವುದರಿಂದ ಯಾರಾದರೂ ಅದರ ಸಾಂಸ್ಥೀಕರಣವನ್ನು ಮುಂದುವರೆಸಿದರೆ ಅದು "ಪಟ್ಟಭದ್ರ ಹಿತಾಸಕ್ತಿ" ಎಂದು ಭಾನುವಾರ ಪ್ರತಿಪಾದಿಸಿದ್ದಾರೆ.

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದಕ್ಕೆ ತಮ್ಮ ಬೆಂಬಲ ನೀಡಿದ 
ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಅವರ ಪಕ್ಷ ಸೇರ್ಪಡೆಯನ್ನು ವಿರೋಧಿಸುವವರು "ಸುಧಾರಣಾ ವಿರೋಧಿ"ಗಳು ಎಂದಿದ್ದಾರೆ.

ಕಳೆದ ವರ್ಷ ಸೋನಿಯಾ ಗಾಂಧಿಗೆ ಪತ್ರ ಬರೆದ 23 ನಾಯಕರಲ್ಲಿ ಮೊಯ್ಲಿ ಸಹ ಒಬ್ಬರಾಗಿದ್ದು, ಜಿ -23 ರ ಸಾಂಸ್ಥಿಕೀಕರಣವನ್ನು ವಿರೋಧಿಸಿದ್ದಾರೆ. "ನಮ್ಮಲ್ಲಿ ಕೆಲವರು ಪಕ್ಷದ ಸುಧಾರಣೆಗಾಗಿ ಮಾತ್ರ ನಮ್ಮ ಸಹಿ ಪಡೆದರು. ಅದು ಪಕ್ಷವನ್ನು ಪುನರ್ನಿರ್ಮಾಣ ಮಾಡಲು, ಅದನ್ನು ನಾಶಮಾಡಲು ಅಲ್ಲ.

"ನಮ್ಮ ಕೆಲವು ನಾಯಕರು ಜಿ -23 ಅನ್ನು ದುರುಪಯೋಗಪಡಿಸಿಕೊಂಡರು ಎಂದು ಪಿಟಿಐಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಈ ಮೊದಲು ಸಾಂಸ್ಥಿಕ ಚುನಾವಣೆ ವೇಳೆ ಮತ್ತೆ ರಾಹುಲ್ ಗಾಂಧಿ ಅವರಿಗೆ ನಾಯಕತ್ವ ಪಟ್ಟ ಕಟ್ಟಲು ಸಿದ್ಧತೆಗಳು ನಡೆದಾಗ 23 ನಾಯಕರು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು. ರಾಹುಲ್ ನಾಯಕತ್ವಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಂದಿನಿಂದ ಜಿ-23 ನಾಯಕರ ಗುಂಪು ಸಕ್ರಿಯವಾಗಿದ್ದು, ಕಾಂಗ್ರೆಸ್ ಹೈಕಮಾಂಡ್‍ನೊಂದಿಗೆ ಮುಸುಕಿನ ಗುದ್ದಾಟ ನಡೆಸುತ್ತಲೇ ಇದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...