ಗಲ್ವಾನ್ ಸಂಘರ್ಷ: ಕೊನೆಗೂ ವಿವಾದಿತ ಪ್ರದೇಶದಿಂದ 1-2 ಕಿ.ಮೀ. ಹಿಂದೆ ಸರಿದ ಚೀನಾ ಸೇನೆ!

Source: PTI | Published on 6th July 2020, 11:47 PM | National News | Don't Miss |

ನವದೆಹಲಿ: ಭಾರತ ಮತ್ತು ಚೀನಾದ 20ಕ್ಕೂ ಹೆಚ್ಚು ಯೋಧರ ಸಾವಿಗೆ ಕಾರಣವಾಗಿದ್ದ ಗಲ್ವಾನ್ ಕಣಿವೆ ಸಂಘರ್ಷದ ಬಳಿಕ ಇದೇ ಮೊದಲ ಬಾರಿಗೆ ಚೀನಾ ಸೇನೆ ವಿವಾದಿತ ಸ್ಥಳದಿಂದ ಕಾಲ್ಕಿತ್ತಿದೆ.
ಹೌದು.. ಈ ಬಗ್ಗೆ ಭಾರತೀಯ ಸೇನಾ ಮೂಲಗಳು ಮಾಹಿತಿ ನೀಡಿದ್ದು, ಗಲ್ವಾನ್ ಕಣಿವೆಯಲ್ಲಿ ಮೊಕ್ಕಾಂ ಹೂಡಿದ್ದ ಚೀನಾ ಸೇನೆ ಇದೀಗ ವಿವಾದಿತ ಪ್ರದೇಶದಿಂದ ಸುಮಾರು 1 ರಿಂದ 2 ಕಿ.ಮೀ ನಷ್ಚು ಹಿಂದಕ್ಕೆ ಹೋಗಿದೆ. ಅಲ್ಲದೆ ವಿವಾದಿತ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ತನ್ನ ಸೇನೇ ಟೆಂಟ್ ಗಳನ್ನೂ ಕೂಡ ಸ್ಥಳಾಂತರ ಮಾಡಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಗಲ್ವಾನ್ ಸಂಘರ್ಷದ ಬಳಿಕ ಉಭಯ ದೇಶಗಳ ಸೇನಾಧಿಕಾರಿಗಳ ನಡುವಿನ ಮಾತುಕತೆ ಫಲಪ್ರದವಾಗಿದ್ದು, ಚೀನಾ ಸೇನೆ ಮಾತ್ರವಲ್ಲದೇ ಭಾರತೀಯ ಸೇನೆ ಕೂಡ ವಿವಾದಿತ ಪ್ರದೇಶದಿಂದ ಹಿಂದಕ್ಕೆ ಸರಿಯಲು ಒಪ್ಪಿಗೆ ನೀಡಿತ್ತು. ಇದರ ಮೊದಲ ಹಂತವಾಗಿ ಚೀನಾ ಸೇನೆ 2 ಕಿ.ಮೀ ಹಿಂದಕ್ಕೆ ಸರಿದಿದ್ದು, ವಿವಾದಿತ ಸ್ಥಳದಲ್ಲಿ ನಿರ್ಮಿಸಲಾಗಿದ್ದ ತನ್ನ ಟೆಂಟ್ ಗಳನ್ನು ಸ್ಥಳಾಂತರ ಮಾಡಿದೆ.
ಜೂನ್ ತಿಂಗಳಲ್ಲಿ ನಡೆದಿದ್ದ ಉಭಯ ದೇಶಗಳ ನಡುವಿನ ಸೇನಾ ಸಂಘರ್ಷ ಭಾರತ ಮತ್ತು ಚೀನಾ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿತ್ತು. ಅಲ್ಲದೆ ಭಾರತ ಸರ್ಕಾರ ಚೀನಾದ ಆ್ಯಪ್ ಗಳನ್ನು ನಿಷೇಧ ಮಾಡಿತ್ತು. ಅಲ್ಲದೆ ಸರ್ಕಾರಿ ಕಾಮಕಾರಿಗಳಲ್ಲಿ ಚೀನಾ ಸಹಭಾಗಿತ್ವವನ್ನು ರದ್ದು ಮಾಡಿದ್ದಲ್ಲದೇ, ಚೀನಾ ಮೂಲದ ಸಂಸ್ಥೆಗಳಿಂದ ಪಡೆಯುತ್ತಿದ್ದ ಬಿಡಿಭಾಗಗಳನ್ನೂ ಮತ್ತು ಇತರೆ ವಸ್ತುಗಳ ಆಮದಿನ ಮೇಲೂ ನಿಷೇಧ ಹೇರಿತ್ತು

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...