ಸಂಪಾದಕರ ರಾಜ್ಯ ಸಂಘದ ಉಪಾಧ್ಯಕ್ಷರಾಗಿ ಗಣಪತಿ ಗಂಗೊಳ್ಳಿ
ಮುಂಡಗೋಡ : ಸುಮಾರು ಮೂರು ದಶಕಗಳಿಂದ ಪತ್ರಿಕಾ ಕ್ಷೇತ್ರದಲ್ಲಿರುವ ಹಿರಿಯ ಪತ್ರಕರ್ತ, ಹುಬ್ಬಳ್ಳಿಯಿಂದ ಪ್ರಕಟವಾಗುವ ಸಂಜೆ ದರ್ಪಣ ದಿನಪತ್ರಿಕೆ ಸಂಸ್ಥಾಪಕ, ಹಾಲಿ ಸಂಪಾದಕ, ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಮೂಲತಃ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದವರಾದ ಗಣಪತಿ ಗಂಗೊಳ್ಳಿಯವರು ನೂತನವಾಗಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ರಾಜ್ಯ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.