ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಗಂಗೂಲಿ ಸೂಕ್ತ ವ್ಯಕ್ತಿ: ಕುಮಾರ ಸಂಗಕ್ಕಾರ

Source: uni | Published on 28th July 2020, 12:33 AM | Sports News | Don't Miss |


ನವದೆಹಲಿ: ಚುರುಕಿನ ಮನಸ್ಥಿತಿ ಮತ್ತು ಆಡಳಿತಗಾರನಾಗಿ ಸಾಕಷ್ಟು ಅನುಭವ ಹೊಂದಿರುವ ಸೌರವ್ ಗಂಗೂಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನ (ಐಸಿಸಿ) ಮುಖ್ಯಸ್ಥ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಅಭಿಪ್ರಾಯಪಟ್ಟಿದ್ದಾರೆ.
ನಾನು ಗಂಗೂಲಿ ಅವರ ದೊಡ್ಡ ಅಭಿಮಾನಿ. ಬಿಸಿಸಿಐ ಅಧ್ಯಕ್ಷ ರಾಗಿರುವ ಸೌರವ್ ವಿಶಾಲ ಮನೋಭಾವ ಹೊಂದಿದ್ದು, ಐಸಿಸಿ ಮುಖ್ಯಸ್ಥನ ಹುದ್ದೆಯನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಬಲ್ಲರು ಎಂದು ಮೆರಿಲ್ ಬೋನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಅಧ್ಯಕ್ಷರಾಗಿರುವ ಸಂಗಕ್ಕಾರ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.
ಕ್ರಿಕೆಟ್ ಆಟಗಾರರ ಮಧ್ಯೆ ಸಂಬಂಧಗಳನ್ನು ಬೆಸೆಯುವ ಸಾಮರ್ಥ್ಯ ಗಂಗೂಲಿ ಅವರಲ್ಲಿದೆ. ಬಿಸಿಸಿಐ ಅಧ್ಯಕ್ಷರಾಗುವ ಮುಂಚಿತವಾಗಿಯೇ ಅವರಲ್ಲಿ ಈ ಗುಣವನ್ನು ನಾನು ನೋಡಿದ್ದೆ. ಐಸಿಸಿಯಂತಹ ಮಹತ್ವದ ಹುದ್ದೆಗೆ ಇಂತಹ ಗುಣ ಅತ್ಯಗತ್ಯ ಎಂದು ಸಂಗಕ್ಕಾರ ಹೇಳಿದ್ದಾರೆ.
ಐಸಿಸಿ ಮುಖ್ಯಸ್ಥರಾಗಿದ್ದ ಶಶಾಂಕ್ ಮನೋಹರ್ ಈ ತಿಂಗಳ ಆರಂಭದಲ್ಲಿ ಹುದ್ದೆ ತೊರೆದಿದ್ದು, ಮುಂದಿನ ಮುಖ್ಯಸ್ಥರ ಚುನಾವಣೆ ನಡೆಯುವವರೆಗೂ ಉಪ ಮುಖ್ಯಸ್ಥರಾಗಿದ್ದ ಇಮ್ರಾನ್ ಖ್ವಾಜಾ ಹಂಗಾಮಿ ಮುಖ್ಯಸ್ಥನ ಸ್ಥಾನದಲ್ಲಿದ್ದಾರೆ. 
ಈ ಹಿಂದೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ನಿರ್ದೇಶಕ ಗ್ರೇಮ್ ಸ್ಮಿತ್ ಕೂಡಾ ಗಂಗೂಲಿಯನ್ನು ಐಸಿಸಿ ಮುಖ್ಯಸ್ಥನ ಸ್ಥಾನಕ್ಕೆ ಸೂಕ್ತ ಎಂದಿದ್ದರು.ಈ ಕುರಿತಂತೆ ಇತ್ತೀಚಿಗೆ ಪ್ರತಿಕ್ರಿಯಿಸಿದ್ದ ಗಂಗೂಲಿ, ಐಸಿಸಿ ಮುಖ್ಯಸ್ಥನ ಸ್ಥಾನಕ್ಕೆ ಸ್ಪರ್ಧಿಸಲು ಆತುರ ವಿಲ್ಲ ಎಂದಿದ್ದರು

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...