ತೋಟ ಕ್ಕೆ ಹಾಕಿದ ಐಬಿಎಕ್ಷ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸಾವು!

Source: so news | By MV Bhatkal | Published on 2nd July 2019, 11:45 AM | Coastal News | Don't Miss |

ಭಟ್ಕಳ:ತೋಟಕ್ಕೆ ಹಾಕಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕಿ ಆಸ್ಪತ್ರೆಗೆ ತರುವಾಗ ಮೃತಪಟ್ಟ ಘಟನೆ ವೆಂಕಟಾಪುರ ಪಂಚಾಯಿತಿಯ ಕಾರಗದ್ದೆಯಲ್ಲಿ ಸೋಮವಾರ ಸಂಜೆ ನಡೆದಿದೆ. 
ಕಾರಗದ್ದೆ ನಿವಾಸಿ ಖುಷಿ ಈಶ್ವರ ನಾಯ್ಕ (6) ಮೃತ ಬಾಲಕಿ.ಈಕೆ ಮನೆಯ ಪಕ್ಕದಲ್ಲಿದ್ದ  ತೋಟಕ್ಕೆ ಆಟವಾಡಲು ತೆರಳಿದ್ದಳು.ಕಾಡು ಪ್ರಾಣಿಗಳು ಬರಬಾರದೆಂದು ತೋಟಕ್ಕೆ ಐಬಿಎಕ್ಷ ಮೂಲಕ ವಿದ್ಯುತ್ ಸಂಪರ್ಕ ನೀಡಲಾಗಿತ್ತು. ತಂತಿ ಸ್ಪರ್ಶಿಸಿದ ಮಗು ತೋಟದಲ್ಲಿ ಹರಿಯುವ ನೀರಿನ ಸಂಪರ್ಕಕ್ಕೆ ಬಂದಿದ್ದು ವಿದ್ಯುತ್ ಶಾಕ್ ಬಲವಾಗಿ ತಗುಲಿದೆ. ಅದನ್ನು ನೋಡಿದ ಸ್ಥಳೀಯರು ಮಗವನ್ನು ವಿದ್ಯುತ್ ಸಂಪರ್ಕದಿಂದ ತಪ್ಪಿಸಿ ಆಸ್ಪತ್ರೆಗೆ ತರುವಷ್ಟರಲ್ಲಿ ಮೃತಪಟ್ಟಿದೆ ಎನ್ನಲಾಗಿದೆ. 
ಐಬಿಎಕ್ಷ ಬಾಕ್ಷನಿಂದ ವಿದ್ಯುತ್ ಸಂಪರ್ಕ ಪಡೆಯುವದು ಕಾನೂನು ಬಾಹಿರವಾಗಿದ್ದು ಈ ಕುರಿತು ವಿದ್ಯುತ್ ಇಲಾಖೆ ಅನುಮತಿ ಇಲ್ಲ. ತೋಟದ ಮಾಲಿಕ ಶುಕ್ರ ಮಂಗಳ ಗೊಂಡ ಇವರು ವಿರುದ್ದ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...