ಮಂಗಳೂರು: ದುಬೈನಿಂದ ಅಕ್ರಮವಾಗಿ ಲಕ್ಷಾಂತರ ರೂ. ಮೌಲ್ಯದ 335 ಗ್ರಾಂ ಚಿನ್ನ ತಂದಿದ್ದ ಪ್ರಯಾಣಿಕರೊಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಸಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಕೇರಳದ ಕಾಸರಗೋಡಿನ ಮುಲಿಯಾರ್ ಗ್ರಾಮದ ನಿವಾಸಿ ಮಹಮ್ಮದ್ ನವಾಜ್ ದುಬೈನಿಂದ ಅಕ್ರಮವಾಗಿ ಚಿನ್ನ ತಂದಿದ್ದ ಪ್ರಯಾಣಿಕ ಎಂದು ಗುರುತಿಸಲಾಗಿದೆ.
ನಿನ್ನೆ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಪ್ರಯಾಣಿಕ ನವಾಜ್ ತನ್ನ ಬಳಿ ಇದ್ದ ಸ್ಕೇಟಿಂಗ್ ವೀಲ್ನಲ್ಲಿ ಚಿನ್ನಾಭರಣ ಬಚ್ಚಿಟ್ಟಿದ್ದನ್ನು ಗಮನಿಸಿದ ಕಸ್ಟಮ್ಸ್ ಅಧಿಕಾರಿಗಳು ಆತನನ್ನ ವಶಕ್ಕೆ ಪಡೆದು ಚಿನ್ನ ವಶಪಡಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
ದುಬೈನಿಂದ ಆಗಮಿಸುವ ಕೆಲ ಪ್ರಯಾಣಿಕರು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನ ಕಳ್ಳ ಸಾಗಾಣಿಕೆ ಮಾಡುವುದು ಮಾಮೂಲು. ಆದರೆ, ಚಾಪೆ ಕೆಳಗೆ ತೂರುವ ಸ್ಲಗ್ಲರ್ಗಳನ್ನು ರಂಗೋಲಿ ಕೆಳಗೆ ತೂರಿ ಬಂಸುವ ಕಸ್ಟಮ್ಸ್ ಅಕಾರಿಗಳ ಕಾರ್ಯ ಶ್ಲಾಘನೀಯವಾಗಿದೆ.