ಮುಂಡಗೋಡ : ತಾಲೂಕಿನ ಉಗ್ಗಿನಕೇರಿ ಗ್ರಾಮದಲ್ಲಿ ಮನೆಯ ಹಿಂಬಾಗಿಲಿನಂದ ಪ್ರವೇಶಿಸಿ ಕಳ್ಳರು ತಮ್ಮ ಕೈ ಚಳಕ ತೋರಿಸಿ ಸುಮಾರು 50ಸಾವಿರ ರೂ ಮೌಲ್ಯದ ಚಿನ್ನಾಭರಣಗಳನ್ನು ಕದ್ದುಕೊಂಡು ಹೋದ ಘಟನೆ ನಡೆದಿದೆ.
ಮಂಗಳವಾರ ಮಧ್ಯರಾತ್ರಿ ಸುಮಾರು 3 ಗಂಟೆಗೆ ಕಳ್ಳರು ಮನೆಯ ಹಿಂದಿನ ಬಾಗಿಲಿನ ಚೀಲಕವನ್ನು ತೆಗೆದು ಮನೆಯ ಒಳಗಡೆ ಪ್ರವೇಶಿಸಿ ದೇವರ ಕೋಣೆಯ ಅಲ್ಮೇರಾದದಲ್ಲಿಯ ಚಿನ್ನಾಭರಣ ಕದ್ದುಕೊಂಡು ಹೋಗಿದ್ದಾರೆ. ಈ ಕುರಿತು ಮನೆಯ ಮಾಲಿಕಳಾದ ಸುವರ್ಣ ಗುರುಶಾಂತಯ್ಯ ಹಿರೇಮಠ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ