ಧಾರವಾಡ : ರಾಜ್ಯಸರ್ಕಾರದ 2 ವರ್ಷಗಳ ಸಾಧನೆಯನ್ನು ಬಿಂಬಿಸುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರತಂದಿರುವ ಪುಸ್ತಕಗಳನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಬಿಡುಗಡೆ ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯದ ಮಾಹಿತಿ ಒಳಗೊಂಡ “ಸವಾಲುಗಳ ಮೀರಿದ ಸಾಧನಾ ಪರ್ವ” ಹಾಗೂ ಧಾರವಾಡ ಜಿಲ್ಲೆಯ ಮಾಹಿತಿ ಒಳಗೊಂಡ “ಸವಾಲುಗಳ 2 ವರ್ಷ ಪರಿಹಾರ ಪ್ರಗತಿ ಸ್ಪರ್ಶ” ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಬಿ. ಸುಶೀಲಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಹಾಗೂ ಮತ್ತಿತರರು ಇದ್ದರು.