ಪ್ರತಿಭಟನೆ ಹತ್ತಿಕ್ಕಲು ಸರಕಾರಕ್ಕೆ ಯಾವುದೇ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಕ್ ಗುಪ್ತಾ

Source: sonews | By Staff Correspondent | Published on 25th February 2020, 12:16 AM | National News | Don't Miss |

ಹೊಸದಿಲ್ಲಿ: ಭಿನ್ನಮತದ ನಾಶ ಅಥವಾ ನಿರುತ್ತೇಜನ ಪ್ರಜಾಪ್ರಭುತ್ವದ ಮೇಲೆ ಘೋರ ಪರಿಣಾಮ ಬೀರುತ್ತದೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗದ ಹೊರತು ಪ್ರತಿಭಟನೆ ಹತ್ತಿಕ್ಕಲು ಸರಕಾರಕ್ಕೆ ಯಾವುದೇ ಹಕ್ಕು ಇಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಕ್ ಗುಪ್ತಾ ಹೇಳಿದ್ದಾರೆ.

ಅವರು ಹೊಸದಿಲ್ಲಿಯಲ್ಲಿ ‘ಭಿನ್ನಮತ ಹಾಗೂ ಪ್ರಜಾಪ್ರಭುತ್ವ’ ಕುರಿತು ಮಾತನಾಡಿದರು. ಸರಕಾರ ಯಾವಾಗಲೂ ಸರಿಯಾಗಿ ಇರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

‘ಬಹುಸಂಖ್ಯಾತ ವಾದ ಪ್ರಜಾಪ್ರಭುತ್ವದ ಸಿದ್ಧಾಂತಕ್ಕೆ ವಿರೋಧಿಯಾಗಿದೆ’ ಎಂದು ಹೇಳಿದ ಅವರು, ಭಿನ್ನಮತವನ್ನು ದೇಶದ್ರೋಹ ಎಂದು ವ್ಯಾಖ್ಯಾನಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯೆ ನೋಂದಣಿ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿರುವ ನಡುವೆ ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರ ಈ ಹೇಳಿಕೆ ಹೊರ ಬಿದ್ದಿದೆ.

ಸರಕಾರ ಯಾವಾಗಲೂ ಸರಿಯಾಗಿ ಇರಲು ಸಾಧ್ಯವಿಲ್ಲ. ನಾವೆಲ್ಲರೂ ತಪ್ಪು ಮಾಡುತ್ತೇವೆ. ಹಿಂಸಾಚಾರಕ್ಕೆ ತಿರುಗದ ಹೊರತು ಪ್ರತಿಭಟನೆಯನ್ನು ಹತ್ತಿಕ್ಕುವ ಹಕ್ಕು ಸರಕಾರಕ್ಕೆ ಇಲ್ಲ ಎಂದು ಅವರು ಹೇಳಿದರು. ಒಂದು ವೇಳೆ ಪಕ್ಷ ಶೇ. 51 ಮತಗಳನ್ನು ಪಡೆಯಿತು ಎಂದರೆ, ಶೇ. 49 ಜನರು 5 ವರ್ಷದ ವರೆಗೆ ಮಾತನಾಡಬಾರದು ಎಂದು ಅರ್ಥವಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಪ್ರಜೆಗೆ ಕೂಡ ಪಾತ್ರವಿದೆ ಎಂದು ಅವರು ತಿಳಿಸಿದರು. ವಿರೋಧಿ ನಿಲುವು ಇದೆ ಎಂದರೆ ದೇಶವನ್ನು ಅಗೌರವಿಸುವುದು ಎಂದು ಅರ್ಥವಲ್ಲ. ಚಿಂತನೆಗಳಲ್ಲಿ ಸಂಘರ್ಷ ಉಂಟಾದಾಗ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಅಲ್ಲದೆ ಪ್ರಶ್ನಿಸುವ ಹಕ್ಕು ಪ್ರಜಾಪ್ರಭುತ್ವದ ಅಂತರ್ಗತ ಭಾಗ ಎಂದು ಅವರು ಹೇಳಿದರು. ಇಂದು ಈ ದೇಶದಲ್ಲಿ ಭಿನ್ನಮತೀಯರನ್ನು ದೇಶದ್ರೋಹಿಗಳಂತೆ ಪರಿಗಣಿಸಲಾಗುತ್ತಿದೆ. ಸರಕಾರ ಹಾಗೂ ದೇಶ ಎರಡು ವಿಭಿನ್ನ ವಿಷಯಗಳು. ದೇಶವಿರೋಧಿ ಪ್ರಕರಣಗಳ ವಿಚಾರಣೆಗಳನ್ನು ನಾವು ಕೈಗೆತ್ತಿಕೊಳ್ಳುವುದಿಲ್ಲ ಎಂದು ಬಾರ್ ಅಸೋಸಿಯೇಶನ್ ನಿರ್ಣಯ ಅಂಗೀಕರಿಸಿರುವುದನ್ನು ನಾನು ನೋಡಿದ್ದೇನೆ. ಇದು ಮಾಡಬಾರದು. ಕಾನೂನು ನೆರವನ್ನು ನಿರಾಕರಿಸಬಾರದು ಎಂದು ಅವರು ಹೇಳಿದರು. ನಿಯಮಗಳನ್ನು ಪ್ರಶ್ನಿಸದ ಹೊರತು ಸಮಾಜ ಅಭಿವೃದ್ಧಿಯಾಗದು ಎಂದು ದೀಪಕ್ ಗುಪ್ತಾ ತಿಳಿಸಿದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...