ಆಡಳಿತ, ವಿರೋಧ ಪಕ್ಷಗಳ ಶಾಸಕರು ಉತ್ತಮ ಸಂಬಂಧ ಹೊಂದಿರಬೇಕು: ಗುಲಾಂ ನಬಿ ಆಜಾದ್

Source: PTI | By MV Bhatkal | Published on 13th September 2021, 11:40 PM | National News | Don't Miss |

ಜೈಪುರ: ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಸೋಮವಾರ ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರ ನಡುವೆ ಹೊಂದಾಣಿಕೆ ಮತ್ತು ಉತ್ತಮ ಬಾಂಧವ್ಯ ಹೊಂದಿರುವುದು ಮುಖ್ಯ ಎಂದು ಕರೆ ನೀಡಿದ್ದಾರೆ. ಇದೇ ವೇಳೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ.

ರಾಜಸ್ಥಾನ ವಿಧಾನಸಭೆಯಲ್ಲಿ 'ಸಂಸದೀಯ ವ್ಯವಸ್ಥೆ ಮತ್ತು ಜನರ ನಿರೀಕ್ಷೆಗಳು' ಕುರಿತ ಸೆಮಿನಾರ್‌ನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಾಸಕಾಂಗದಲ್ಲಿ ತಿಳಿವಳಿಕೆಯು ಒಂದು ಪ್ರಮುಖ ಅಂಶವಾಗಿದೆ ಮತ್ತು ಸದಸ್ಯರಲ್ಲಿ ಉತ್ತಮ ತಿಳಿವಳಿಕೆ ಇದ್ದಾಗ ಮಾತ್ರ ಒಳ್ಳೆಯ ಕೆಲಸಕ್ಕೆ ಬೆಂಬಲ ಸಿಗುತ್ತದೆ ಎಂದರು.

ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು ಹೊಂದಾಣಿಕೆ ಮತ್ತು ಉತ್ತಮ ಬಾಂಧವ್ಯ ಹೊಂದಿರಬೇಕು. ಒಳ್ಳೆಯ ಕೆಲಸಕ್ಕೆ ಬೆಂಬಲ ಸಿಗಬೇಕಾದರೆ ಅಲ್ಲಿ ಉತ್ತಮ ತಿಳಿವಳಿಕೆಯ ಅಗತ್ಯವಿರುತ್ತದೆ. ಒಂದು ವೇಳೆ ಅಂತರವಿದ್ದರೆ ಒಳ್ಳೆಯ ಕೆಲಸಕ್ಕೂ ಬೆಂಬಲ ಸಿಗುವುದಿಲ್ಲ. ಆದ್ದರಿಂದ, ಶಾಸಕರ ನಡುವೆ ಉತ್ತಮ ಕೆಲಸದ ಸಂಬಂಧಗಳನ್ನು ಹೊಂದುವ ಅಗತ್ಯವಿದೆ' ಎಂದು ಅವರು ಹೇಳಿದರು.

ವಿರೋಧ ಪಕ್ಷಗಳ ನಾಯಕರೊಂದಿಗೆ ತಮ್ಮ ಅನುಭವವನ್ನು ಹಂಚಿಕೊಂಡ ಆಜಾದ್,ತಾವು ಕೇಂದ್ರ ಸಂಸದೀಯ ವ್ಯವಹಾರಗಳ ಮಂತ್ರಿಯಾಗಿದ್ದಾಗ, ಆಗಿನ ವಿರೋಧ ಪಕ್ಷದ ನಾಯಕ ವಾಜಪೇಯಿ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದೆ ಮತ್ತು ಅವರು ಎರಡು ಮೂರು ದಿನಗಳಿಗೊಮ್ಮೆ ಒಟ್ಟಾಗಿ ಊಟ ಮಾಡುತ್ತಿದ್ದೆವು'. ಎಂದು ಹೇಳಿದರು.

ಚುನಾವಣೆ ಸಮಯದಲ್ಲಿ ಮಾತ್ರ ಭಿನ್ನಾಭಿಪ್ರಾಯಗಳನ್ನು ನೋಡಬೇಕು. ನಾನೆಂದಿಗೂ ಪ್ರತಿಸ್ಪರ್ಧಿ ಅಭ್ಯರ್ಥಿಯ ಹೆಸರನ್ನು ಉಲ್ಲೇಖಿಸುತ್ತಿರಲಿಲ್ಲ. ಚುನಾವಣಾ ರ‍್ಯಾಲಿಗಳಲ್ಲಿ, ನಾವು ಏನು ಮಾಡುತ್ತೇವೆ ಎಂಬುದನ್ನಷ್ಟೇ ಜನರಿಗೆ ಹೇಳಬೇಕು' ಎಂದು ಅವರು ತಿಳಿಸಿದರು.

'ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗಗಳ ಪಾತ್ರ ಮತ್ತು ಜವಾಬ್ದಾರಿಗಳನ್ನು ಸಂವಿಧಾನದಲ್ಲಿ ಉತ್ತಮವಾಗಿ ವ್ಯಾಖ್ಯಾನಿಸಲಾಗಿದೆ. ಆದಾಗ್ಯೂ, ಶಾಸಕಾಂಗವು ಇವುಗಳಲ್ಲಿ ಮೊದಲನೆಯದು. ಭಾರತದಲ್ಲಿ ಶಾಸಕರು ಕಾನೂನುಗಳನ್ನು ರೂಪಿಸುವುದರ ಹೊರತಾಗಿಯೂ, ‌ತಮ್ಮ ಕ್ಷೇತ್ರದತ್ತ ಗಮನಹರಿಸಬೇಕು ಮತ್ತು ನೀರು ಅಥವಾ ವಿದ್ಯುತ್‌ಗೆ ಸಂಬಂಧಿಸಿದ ಜನರ ವಿವಿಧ ಬೇಡಿಕೆಗಳನ್ನು ಪರಿಹರಿಸಬೇಕು ಎಂದು ಅವರು ಹೇಳಿದರು.

ನಿಯಮಗಳನ್ನು ಅನುಸರಿಸುವ ಮತ್ತು ಅರ್ಥಮಾಡಿಕೊಳ್ಳುವ ಮೂಲಕ ಶಾಸಕರು ಸದನದ ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...