ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಕಲ್ಯಾಣ ಸೇವಾ ಸಮಿತಿಯ ವತಿಯಿಂದ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಔಷಧಿ ದೇಣಿಗೆ

Source: S.O. News Service | By MV Bhatkal | Published on 7th June 2021, 8:27 PM | Coastal News | Don't Miss |


ಭಟ್ಕಳ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಕಲ್ಯಾಣ ಸೇವಾ ಸಮಿತಿಯ ವತಿಯಿಂದ ಭಟ್ಕಳ ತಾಲೂಕಾ ಆಸ್ಪತ್ರೆಗೆ ಕೋವಿಡ್ ಸಂಬಂಧಿತ ಹಾಗೂ ಇತರೆ ಪ್ರಮುಖ ಔಷಧಿಯನ್ನು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ ಅವರಿಗೆ ಸೋಮವಾರ ಸಮಿತಿಯ ಪದಾಧಿಕಾರಿಗಳು ದೇಣಿಗೆಯಾಗಿ ನೀಡಿದರು.
ಸಮಿತಿಯ ಗೌರವಾಧ್ಯಕ್ಷ ನರೇಂದ್ರ ನಾಯಕ ಮಾತನಾಡಿ ಸಮಾಜ ಬಾಂಧವರ ಹಾಗೂ ದಾನಿಗಳ ಸಹಕಾರದೊಂದಿಗೆ ಸಮಿತಿಯು ಈ ಕಾರ್ಯವನ್ನು ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಡಾ. ಸವಿತಾ ಕಾಮತ ಹಾಗೂ ತಂಡವು ಹಗಲಿರುಳು ಶ್ರಮಿಸಿ ಈ ಆಸ್ಪತ್ರೆಯಲ್ಲಿ ಉತ್ತಮ ಸೌಲಭ್ಯವು ಸರ್ವರಿಗೂ ಲಭಿಸುವಂತಾಗಿಸಿದ್ದಾರೆ. ಅವರೊಂದಿಗೆ ಸಹಕರಿಸುತ್ತಿರುವ ಅವರ ಸಹಪಾಠಿ ವೈದ್ಯರು, ಸಿಬ್ಬಂದಿ ಅಭಿನಂದನಾರ್ಹರು ಎಂದು ಹೇಳಿದರು.
ಅಧ್ಯಕ್ಷ ಕಲ್ಪೇಶ ಪೈ ಮಾತನಾಡಿ ಸರ್ಕಾರದೊಂದಿಗೆ ಸಂಘ ಸಂಸ್ಥೆಗಳು ಕೈ ಜೋಡಿಸಿದಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗುವುದು. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಯತ್ನವನ್ನು ಮಾಡುವೆವು. ನಮ್ಮ ಆಸ್ಪತ್ರೆ ನಮ್ಮ ಹೆಮ್ಮೆ ಎಂದರು.
ಕಾರ್ಯಕ್ರಮದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ನಾಗೇಶ ಪೈ, ಕಾರ್ಯದರ್ಶಿ ಶ್ರೀನಾಥ ಪೈ, ಸಮಿತಿ ಸದಸ್ಯರು ಉಪಸ್ಥಿತರಿದ್ದರು

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...