ಕಾರವಾರ: ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿರುವ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮದ್ಯಮಾರಾಟ ಅಂಗಡಿಗಳ ಮತ್ತು ಮದ್ಯ ತಯಾರಿಕೆ ಘಟಕಗಳ ಮುಚ್ಚಲು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಹರೀಶ್ಕುಮಾರ್ ಕೆ. ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ವಿವಿಧ 8 ಗ್ರಾಮ ಪಂಚಾಯ್ತಿಗಳಲ್ಲಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು ದಿನಾಂಕ 13-05-2019ರಿಂದ 31-05-2019ರವರೆಗೆ ಚುನಾವಣೆ ನಡೆಯುತ್ತಿರುವ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಅಂಗಡಿಗಳು ಮತ್ತು ಮದ್ಯ ತಯಾರಿಕೆ ಘಟಕಗಳನ್ನು ಮುಚ್ಚಲು ಆದೇಶಿಸಿದ್ದು ಮೊಹರು ಮಾಡಿದ ಬೀಗದ ಕೈಗಳನ್ನು ಆಯಾ ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳಿಗೆ ಒಪ್ಪಿಸುವಂತೆ ಅವರ ಆದೇಶದಲ್ಲಿ ತಿಳಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರದೇಶ ವ್ಯಾಪ್ತಿಯಲ್ಲಿ ಮದ್ಯವನ್ನು ಸ್ವಾದೀನದಲ್ಲಿರಿಸಿಕೊಂಡಿರುವುದು ಅಥವಾ ಮದ್ಯ ಸೇವಿಸಿ ಸಾರ್ವಜನಿಕ ಉಪದ್ರವ ನೀಡಿದ ಬಗ್ಗೆ ಕಂಡು ಬಂದರೆ ಅವರನ್ನು ಚುನಾವಣೆ ಮುಗಿಯುವವರೆಗೆ ಕಸ್ಟಡಿಯಲ್ಲಿ ಇರಿಸತಕ್ಕದ್ದು ಮತ್ತು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಾನುಸಾರ ಅಬಕಾರಿ ಉಪ ಆಯುಕ್ತರು ಕಾರವಾರ ಇವರು ಈ ಆದೇಶವನ್ನು ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.
ಅಂಕೋಲಾ ತಾಲೂಕು ಹೊನ್ನೆಬೈಲ್, ಕುಮಟಾ ತಾಲೂಕು ಗೋಕರ್ಣ (ತದಡಿ ಬೆಲೆಖಾನ), ಹೊನ್ನಾವರ ತಾಲೂಕು ಹಡಿನಬಾಳ (ಮುಟ್ಟಾ), ಶಿರಸಿ ತಾಲೂಕು ಬಿಸಲಕೊಪ್ಪ, (ಮುಳಲಗಾಂವ), ಇಸಳೂರು (ಚಿಪಗಿ), ಗುಡ್ನಾಪುರ (ಅಚ್ಚರಣಿ), ಸಿದ್ದಾಪುರ ತಾಲೂಕು ತಾರೆಹರ್ಳಳಿ (ಕಾನುಸೂರು), ಜೊಯಿಡಾ ತಾಲೂಕು ಪ್ರದಾನಿ ಈ ಗ್ರಾಮ ಪಂಚಾಯ್ತಿಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...
ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ...
ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ...
ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!
ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!