ಗುಜರಾತ್: ದಲಿತರ ವಿವಾಹ ಮೆರವಣಿಗೆ ಮೇಲೆ ದಾಳಿ

Source: Vb | By I.G. Bhatkali | Published on 27th May 2022, 12:26 PM | National News |

ಅಹ್ಮದಾಬಾದ್: ದಲಿತ ಮಹಿಳೆಯ ವಿವಾಹ ಮೆರವಣಿಗೆ ಮೇಲೆ ಮೇಲ್ವಾತಿ (ಠಾಕೂರ್)ಯ ಹಲವರು ದಾಳಿ ನಡೆಸಿದ ಘಟನೆ ಗುಜರಾತ್‌ನ ಅಹದಾಬಾದ್‌ನ ದಂಗಾರ್ವ ಗ್ರಾಮದಲ್ಲಿ ಗುರುವಾರ ನಡೆದಿದೆ. ಇದರಿಂದ ನಾಲ್ವರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ದಂಗಾರ್ವ ಗ್ರಾಮಕ್ಕೆ ತೆರಳಿದ್ದಾರೆ ಹಾಗೂ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ವಿವಾಹ ಪೂರ್ಣಗೊಂಡ ಬಳಿಕ ಎಫ್‌ಐಆರ್ ದಾಖಲಿಸಲು ವಧುವಿನ ಕುಟುಂಬ ನಿರ್ಧರಿಸಿದೆ.

ತಾರಾ ಜಗದೀಶ್‌ ಪರ್ಮಾರ್ ಹಾಗೂ ರಾಹುಲ್ ಹರೀಶ್ ಪರ್ಮಾರ್ ಅವರ ವಿವಾಹವನ್ನು ಗುರುವಾರ ಅಪರಾಹ್ನ ನಿಗದಿಪಡಿಸಲಾಗಿತ್ತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...