ಭಟ್ಕಳ:ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಎತ್ತರಕ್ಕೆ ಬೆಳೆಯುತ್ತೀರುವ ನಾಮಧಾರಿ ಸಮಾಜ ಉಳಿದ ಸಮಾಜಕ್ಕೂ ಉತ್ತಮ ಸಂಸ್ಕಾರ ಹಂಚಿ ದೊಡ್ಡ ಸಮಾಜವಾಗಿ ಜಿಲ್ಲೆಗೆ ಮಾರ್ಗದರ್ಶನ ಮಾಡಲಿ ಎಂದು ಉಜಿರೆ ಶ್ರೀ ರಾಮ ಕೇತ್ರದ ಪೀಠಾಧಿಪತಿ ನಾಮಧಾರಿ ಕುಲಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಅವರು ಶನಿವಾರ ಆಸರಕೇರಿ ನಿಚ್ಛಲಮಕ್ಕಿ ವೆಂಕಟ್ರಮಣ ದೇವರ ಪಾಲಕಿ ಉತ್ಸವದಲ್ಲಿ ಉಪಸ್ಥಿತರಿದ್ದು, ಭಕ್ತರಿಗೆ ಆಶೀರ್ವಚನ ನೀಡಿದರು. ಮನುಷ್ಯ ಇಂದ್ರಿಯ ಸುಖದ ಆಸಯಿಂದ ನೆಮ್ಮದಿ ಕಳೆದುಕೊಳ್ಳುತ್ತಿದ್ದಾನೆ. ನಿಜವಾದ ನೆಮ್ಮದಿ ಇರುವುದು ತ್ಯಾಗ ಹಾಗೂ ಸೇವೆಯಿಂದ ಎನ್ನುವುದು ಮರೆತಿದ್ದಾನೆ. ಜ್ಞಾನದ ಕೊರತೆಯಿಂದ ಮನುಷ್ಯ ಕಳೆದು ಹೋದ ನಿನ್ನೆಯ ಬಗ್ಗೆ ಯೋಚಿಸುತ್ತಾ ಜೀವನ ಕಳೆಯುತ್ತಿದ್ದಾನೆ ಎಂದು ವಿಷಾದ ವ್ಯಕ್ತಪಡಿಸಿದರು. ವ್ಯಕ್ತಿ ಶಾಶ್ವತ ಅಲ್ಲ ಬದಲಾಗಿ ಸಮಾಜ ಶಾಶ್ವತ, ಸಮಾಜದ ಗುರುಪೀಠ ಶಾಶ್ವತ. ಪಾತಾಳಕ್ಕೆ ಕುಸಿದ ವ್ಯಕ್ತಿಯನ್ನು ಮೇಲೆತ್ತುವ ಸಾಮರ್ಥ್ಯ ಗುರುವಿದೆ. ಅಂತಹ ಜ್ಞಾನಿ ಗುರುವನ್ನು ನಿಂದಿಸುವವನು ಮುಂದೆ ಎರಡು ಕಾಲಿನ ಬದಲಿಗೆ ನಾಲ್ಕು ಕಾಲಿನ ಪ್ರಾಣಿಯಾಗಿ ಜನಿಸುವುದು ಖಚಿತ ಎಂದರು. ಸಂಸ್ಕಾರ ಕೊರತೆಯಿಂದ ಮಕ್ಕಳು ಇಂದು ಹಾದಿ ತಪ್ಪುತ್ತಿದ್ದಾರೆ. ಸೋಶೀಯಲ್ ಮೀಡಿಯಾಗಳಲ್ಲಿ ಸಕ್ರೀಯರಾಗಿರುವ ಯುವಕರು ಅದರ ಸದುಪಯೋಗ ಬದಲಾಗಿ ದುರುಪಯೋಗಕ್ಕೆ ಮುಂದಾಗುತ್ತಿದ್ದಾರೆ.
ಇಂದಿನ ಮಕ್ಕಳಿಗೆ ಸತ್ಯ ಹಾಗೂ ಧರ್ಮದ ಪಾಠದ ಅಗತ್ಯ ಇದೆ ಎಂದರು.
ನಾಮಧಾರಿ ಸಮಾಜದ ಅಧ್ಯಕ್ಷ ಕೃಷ್ಣ ನಾಯ್ಕ ಆಸರಕೇರಿ ಮಾತನಾಡಿ ನಮಾಧಾರಿ ಸಮಾಜವನ್ನು ಧಾರ್ಮಿಕವಾಗಿ ಒಗ್ಗೂಡಿಸಲು ಹಲವಾರು ಬದಲಾವಣೆ ಮಾಡಲಾಗಿದೆ. ಸಮಾಜದ ವತಿಯಿಂದ ಶಿಕ್ಷಣ ಸಂಸ್ಥೆ ತೆರೆಯಬೇಕು ಎನ್ನುವುದು ನಮ್ಮೆಲ್ಲರ ಕನಸಾಗಿದ್ದು, ಮುಂದಿನ ದಿನಗಳಲ್ಲಿ ಅದು ಸಾಕಾರಗೊಳ್ಳಲಿ ಎಂದು ಆಶಯ ವ್ಯಕ್ತಪಡಿಸಿದರು. ಉಪಾಧ್ಯಕ್ಷ ಭವಾನಿಶಂಕರ ವರದಿ ವಾಚನ ಮಾಡಿದರು.
ಭಟ್ಕಳ ಶಾಸಕ ಸುನೀಲ ನಾಯ್ಕ, ರಾಜ್ಯ ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಗೋವಿಂದ ನಾಯ್ಕ, ಸಮಾಜದ ಮುಖಂಡರಾದ ಎಲ್.ಎಸ್.ನಾಯ್ಕ, ಎಂ.ಆರ್.ನಾಯ್ಕ ಸೇರಿದಂತೆ ಹಲವರು ಇದ್ದರು
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...