ಬ್ರಾಹ್ಮಣರನ್ನು ಸಿಎಂ ಮಾಡಲು ಆರೆಸ್ಸೆಸ್ ತೀರ್ಮಾನ: ಎಚ್.ಡಿ. ಕುಮಾರಸ್ವಾಮಿ

Source: Vb | By I.G. Bhatkali | Published on 6th February 2023, 12:42 PM | State News |

ಬೆಂಗಳೂರು: 'ವಿಧಾನಸಭೆ ಚುನಾವಣೆಯ ಬಳಿಕ ಆರೆಸ್ಸೆಸ್, ಸಂಘ ಪರಿವಾರದವರು ಬ್ರಾಹ್ಮಣ ಸಮುದಾಯದ ಪ್ರಹ್ಲಾದ್ ಜೋಶಿ ಯವರನ್ನು ಮುಖ್ಯಮಂತ್ರಿ ಮಾಡಲು ತೀರ್ಮಾನಿಸಿದ್ದಾರೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ರವಿವಾರ ಇಲ್ಲಿನ ದಾಸರಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ 'ಪಂಚರತ್ನ' ಯಾತ್ರೆ ಸಂದರ್ಭದಲ್ಲಿ ಜೋಶಿ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, 'ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಕೊಂದ ಬ್ರಾಹ್ಮಣ ವರ್ಗಕ್ಕೆ ಪ್ರಹ್ಲಾದ್ ಜೋಶಿ ಸೇರಿದ್ದು, ಅವರು ಹಳೆಯ ಕಾಲದ ಬ್ರಾಹ್ಮಣರಂತಲ್ಲ' ಎಂದು ವಾಗ್ದಾಳಿ ನಡೆಸಿದರು.

'ಬ್ರಾಹ್ಮಣ ಸಮುದಾಯದಲ್ಲಿ ಎರಡು-ಮೂರು ವಿಧಗಳಿವೆ. ಶೃಂಗೇರಿಯ ಮಠವನ್ನು ಒಡೆದ ಬ್ರಾಹ್ಮಣ ವರ್ಗ ಜೋಶಿ ಅವರದ್ದು. ನಮ್ಮ ಭಾಗದ ಹಳೆಯ ಬ್ರಾಹ್ಮಣರಂತಲ್ಲ ಅವರು. ಜೋಶಿಯವರು 'ಮರಾಠಾ ಪೇಳ್ವೆ' ಸಮುದಾಯಕ್ಕೆ ಸೇರಿದವರು. ಆದರೆ, ಬ್ರಾಹ್ಮಣರು ಸರ್ವೇ ಜನಾಃ ಸುಖಿನೋ ಭವಂತು ಅನ್ನುವವರು. ಸರ್ವ ಜನರ ಕ್ಷೇಮ ಬಯಸುವವರು' ಎಂದು ಕುಮಾರಸ್ವಾಮಿ ವಿಶ್ಲೇಷಿಸಿದರು.

ಮಾರ್ಚ್‌ನಲ್ಲಿ ಸಮಾರೋಪ: 'ಜೆಡಿಎಸ್ ಪಂಚರತ್ನ ಯಾತ್ರೆ ಈ ತಿಂಗಳ 27ರವರೆಗೆ ನಡೆಯಲಿದೆ. ಮಾರ್ಚ್‌ನಲ್ಲಿ ಹಾಸನ, ಮೈಸೂರು, ಬೆಂಗಳೂರಿನಲ್ಲಿ ರಥಯಾತ್ರೆ. ಮಾರ್ಚ್ 20 ಅಥವಾ 25ಕ್ಕೆ ಸಮಾರೋಪ ಕಾರ್ಯಕ್ರಮ ಮಾಡಲಾಗುವುದು ಎಂದು ಅವರು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡ ಕ್ಷೇತ್ರಗಳು ಜೆಡಿಎಸ್‌ ಸರಕಾರದ ಅವಧಿಯಲ್ಲಿ ಅಭಿವೃದ್ಧಿ ಕಂಡಿವೆ. ಆದರೆ, ಇದೀಗ ಅಭಿವೃದ್ಧಿ ನೆಪದಲ್ಲಿ ಬಿಜೆಪಿ ಲೂಟಿ ಮಾಡುತ್ತಿದೆ. ಜನರ ಬದುಕಿನಲ್ಲಿ ಚೆಲ್ಲಾಟ ಆಡುತ್ತಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...