ಹಜ್ ಯಾತ್ರೆಯಿಂದ ಮನುಷ್ಯನ ಮನಸ್ಸು ಪರಿಶುದ್ದ ವಾಗುತ್ತದೆ-ಡಾ ಶಿವಾನಂದ ಕುಡ್ತರ್ಕರ್

Source: sonews | By Staff Correspondent | Published on 29th June 2019, 6:32 PM | Coastal News | Don't Miss |

ಕಾರವಾರ: ಹಜ್ ಯಾತ್ರೆ ಮಾಡುವುದು ಮುಸ್ಲಿಮರಿಗೆ ಒಂದು ಪವಿತ್ರ ಕಾರ್ಯ. ಹಜ್ ಯಾತ್ರೆಯಿಂದ ಮನುಷ್ಯನ ಮನಸ್ಸು ಪರಿಶುದ್ದವಾಗುತ್ತದೆ. ಪ್ರತಿವರ್ಷ ತಾನು  ಇದನ್ನು ಕಂಡಿದ್ದೇನೆ. ಎಲ್ಲಾ ಹಜ್ ಯಾತ್ರಿಗಳಿಗೆ ಶುಭವಾಗಲಿ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ||ಶಿವಾನಂದ ಕುಡ್ತರ್ಕರ್ ಹೇಳಿದರು.

ಅವರು ಸಾಹಿಲ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಕಾರವಾರದವರು ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಂಡ ಹಜ್ ಯಾತ್ರಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಪ್ರವಚನವನ್ನು ನೀಡಲು ಆಗಮಿಸಿದ ಕಾರವಾರ ಮಸೀದಿಯ ಮೌಲಾನಾ ಬದ್ರುಝ್ಝಾ ರವರು ಹಜ್ ಯಾತ್ರೆಯನ್ನು ಕೈಗೊಳ್ಳಬೇಕಾದರೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಹಾಗೂ ಪ್ರಾಮುಖ್ಯತೆಯ ಬಗ್ಗೆ ವಿವರವಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲೆಯ ಬೇರೆ ಬೇರೆ ತಾಲೂಕಿನಿಂದ ಆಗಮಿಸಿದ ಹಜ್ ಯಾತ್ರಿಗಳಿಗೆ ಯಾವದೇ ಸಾಂಕ್ರಮಿಕ ರೋಗಗಳು ಬಾರದಂತೆ ತಡೆಯಲು ಲಸಿಕೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಡಾ|| ಅಮಿತ ಕಾಮತ, ಡಾ|| ನದೀಮ್ ಸಯ್ಯದ್, ಡಾ|| ಮೋಹನ ಬಾಬು, ರಾಷ್ಟ್ರ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ನಜೀರ್ ಅಹಮದ್ ಯು.ಶೇಖ್, ನಗರಸಭೆಯ ಮಾಜಿ ಅಧ್ಯಕ್ಷ ಎಮ್.ಇ.ಶೇಖ್, ಅಸ್ಲಮ್ ಶೇಖ್, ಮುಸ್ತಾಕ್ ಮೊಮಿನ್, ಅಝೀಮ್ ಅಂಬಾರಿ, ಜಿಲ್ಲಾ ವಕ್ಫ ಅಧ್ಯಕ್ಷ ಖಯಾಮ ಮುಗದ್, ಮೊಹಮ್ಮದ್ ಅಕ್ಬರ್ ಶೇಖ್, ಜಿಲ್ಲಾ ಆಸ್ಪತ್ರೆಯ ಸುಪರಿಂಟೆಂಡೆಂಟ್ ಪಾವಸ್ಕರ್, ಹಜ್ ಕಮಿಟಿಯ ಪ್ರತಿನಿಧಿ ನಾಸಿರ್ ಸಾಬ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಸಾಹಿಲ್ ಸೋಶಿಯಲ್ ವೆಲ್‍ಫೇರ್ ಟ್ರಸ್ಟ್‍ನ ಅಧ್ಯಕ್ಷರಾದ ಮೊಹಮ್ಮದ್ ಕಲೀಂ ಶೇಖ್ ಎಲ್ಲರನ್ನು ಸ್ವಾಗತಿಸಿದರು. ಕೊನೆಯಲ್ಲಿ ಕಲ್ಲೂರ್ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷರಾದ ಇಬ್ರಾಹಿಂ ಕಲ್ಲೂರ್ ವಂದಿಸಿದರು.   

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...