ಕಂದಾಪುರ ಸಮೀಪದ ತ್ರಾಸಿಯಲ್ಲಿ ಅಂಗಡಿಯೊಂದರಲ್ಲಿ ಬೆಂಕಿ; ಲಕ್ಷಾಂತರ ಮೌಲ್ಯದ ಹಾನಿ

Source: S O News | By I.G. Bhatkali | Published on 26th December 2021, 11:56 AM | Coastal News | Don't Miss |

ಗಂಗೊಳ್ಳಿ: ಕುಂದಾಪುರ ಸಮೀಪದ ತ್ರಾಸಿಯಲ್ಲಿ ಹಾರ್ಡ್ವೇರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಗಂಗೊಳ್ಳಿ ಪೊಲೀಸ್ ಠಾಣೆ ಸಮೀಪದ ಮಲ್ಲಿಕಟ್ಟೆಯಲ್ಲಿ ಶನಿವಾರ ಸಂಜೆ 7:15ರ ಸುಮಾರಿಗೆ ಘಟನೆ ನಡೆದಿದೆ.

ರಾತ್ರಿ 7 ಗಂಟೆಗೆ ಎಂದಿನಂತೆ ಬೆನಕ ಹಾರ್ಡ್ವೇರ್ ಅಂಡ್ ಪೇಂಟ್ಸ್  ಎಂಬ ಅಂಗಡಿಯನ್ನು ಮುಚ್ಚಿ ಅಂಗಡಿ ಮಾಲೀಕ
ಸುಬ್ರಾಯ ಬಳೆಗಾರ ಮನೆಗೆ ತೆರಳಿದ್ದರು ಎಂದು ವರದಿಯಾಗಿದೆ. ಸಂಜೆ 7.15 ರ ಸುಮಾರಿಗೆ ಅಂಗಡಿಯ ಒಳಗಿನಿಂದ ಹೊಗೆ ಏಳುತ್ತಿರುವುದು ಕಂಡು ಬಂದಿದ್ದು, ಬೆಂಕಿ ಕಾಣಿಸಿಕೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ.

ಮಾಹಿತಿ ಪಡೆದ ಗಂಗೊಳ್ಳಿ ಪೊಲೀಸ್ ಸಿಬ್ಬಂದಿ, ಬೆಂದೂರು, ಕಂದಾಪುರ ಮತ್ತು ಉಡುಪಿಯಿಂದ  ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಘಟನಾ ಸ್ಥಳಕ್ಕೆ ದೌಡಾಯಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸತತ ನಾಲ್ಕು ತಾಸು ಕಾರ್ಯಾಚರಣೆ ನಡೆಸಿದರು.

ಅಂಗಡಿಯಲ್ಲಿ ಸುಮಾರು 1.5 ಕೋಟಿ ಮೌಲ್ಯದ ಸಾಮಾಗ್ರಿಗಳಿದ್ದು, ಬೆಂಕಿಯಿಂದ ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ವರದಿಯಾಗಿದೆ.

ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...