ಧರ್ಮ ಸಂಸದ್‌ನಲ್ಲಿ ದ್ವೇಷ ಭಾಷಣ ಪ್ರಕರಣ; ಕೇಂದ್ರ ಸರಕಾರಕೆ ಸುಪ್ರೀಂ ನೋಟಿಸ್

Source: Vb | By I.G. Bhatkali | Published on 14th January 2022, 7:21 AM | National News |

ಹೊಸದಿಲ್ಲಿ: ಹೊಸ ದಿಲ್ಲಿ ಹಾಗೂ ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಎರಡು ಕಾರ್ಯಕ್ರಮಗಳಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಬಗ್ಗೆ ತನಿಖೆ ಹಾಗೂ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ಕುರಿತಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರಕಾರ ಹಾಗೂ ಇತರರಿಂದ ಪ್ರತಿಕ್ರಿಯೆ ಕೋರಿದೆ.

ದ್ವೇಷ ಭಾಷಣ ಆರೋಪದ ಕುರಿತಂತೆ ಎಸ್‌ಐಟಿಯಿಂದ ಸ್ವತಂತ್ರ, ವಿಶ್ವಾಸಾರ್ಹ ಹಾಗೂ ಪಹಪಾತರಹಿತ ತನಿಖೆಗೆ ನಿರ್ದೇಶ ನೀಡುವಂತೆ ಕೋರಿ ಪತ್ರಕರ್ತ ಖುರ್ಬಾನ್ ಅಲಿ ಹಾಗೂ ಪಾಟ್ನಾ ಉಚ್ಚ ನ್ಯಾಯಾಲಯದ ಮಾಜಿ ನ್ಯಾಯಮೂರ್ತಿ, ಹಿರಿಯ ವಕೀಲ ಅಂಜನಾ ಪ್ರಕಾಶ್ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ ಈ ನೋಟಿಸು ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಹಾಗೂ ಹಿಮಾ ಕೊಟ್ಟ ಅವರನ್ನು ಕೂಡ ಒಳಗೊಂಡ ಪೀಠ, ಭವಿಷ್ಯದಲ್ಲಿ ಧರ್ಮ ಸಂಸದ್ ನಡೆಸುವ ವಿರುದ್ಧ ಸ್ಥಳೀಯ ಪ್ರಾಧಿಕಾರಕ್ಕೆ ಅಹವಾಲು ಸಲ್ಲಿಸಲು ದೂರುದಾರರಿಗೆ ಅನುಮತಿ ನೀಡಿದೆ. ಈ ಪ್ರಕರಣದ ವಿಚಾರಣೆಯ ನ್ನು ನ್ಯಾಯಾಲಯ 10 ದಿನ ಮುಂದೂಡಿದೆ.

ಹರಿದ್ವಾರ ಹಾಗೂ ದಿಲ್ಲಿಯಲ್ಲಿ 2021 ಡಿಸೆಂಬರ್ 17 ಹಾಗೂ 19ರ ನಡುವೆ ದ್ವೇಷ ಭಾಷಣ ಮಾಡಿರುವುದನ್ನು ಈ ಮನವಿ ನಿರ್ದಿಷ್ಟ ವಾಗಿ ಉಲ್ಲೇಖಿಸಿದೆ. ಇಂತಹ ದ್ವೇಷ ಭಾಷಣಗಳನ್ನು ನಿಯಂತ್ರಿಸಲು ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಅದು ಕೋರಿದೆ.

ಒಂದು ಕಾರ್ಯಕ್ರಮವನ್ನು ಯತಿ ನರಸಿಂಹಾನಂದ ಅವರು ಹರಿ ದ್ವಾರದಲ್ಲಿ ಆಯೋಜಿಸಿದ್ದರು. ಇನ್ನೊಂದು ಕಾರ್ಯಕ್ರಮವನ್ನು ದಿಲ್ಲಿ ಯಲ್ಲಿ 'ಹಿಂದೂ ಯುವ ವಾಹಿನಿ' ಆಯೋಜಿಸಿತ್ತು. ಈ ಎರಡೂ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಲಾಗಿತ್ತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...