ದ್ವೇಷಭಾಷಣ ತಡೆಯಬೇಕಾಗಿದೆ: ಕೇಂದ್ರಕ್ಕೆ ಸುಪ್ರೀಂ ಆದೇಶ

Source: Vb | By I.G. Bhatkali | Published on 12th August 2023, 9:35 AM | National News |

ಹೊಸದಿಲ್ಲಿ: ದೇಶಾದ್ಯಂತ ದ್ವೇಷಭಾಷಣದ ಪ್ರಕರಣಗಳ ಪರಿಶೀಲನೆಗೆ ಸಮಿತಿಯನ್ನು ರಚಿಸುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಕೇಂದ್ರ ಸರಕಾರಕ್ಕೆ ಆದೇಶ ನೀಡಿದೆ.

ಕಳೆದ ವಾರ ಆರು ಮಂದಿಯನ್ನು ಬಲಿತೆಗೆದುಕೊಂಡ ಭೀಕರ ಕೋಮುಗಲಭೆ ಸಂಭವಿಸಿದ ಹರ್ಯಾಣದ ನೂಹ್ ಸೇರಿದಂತೆ ದೇಶಾದ್ಯಂತ ಒಂದು ಸಮುದಾಯದ ಸದಸ್ಯರ ಹತ್ಯೆಗೆ ಕರೆ ನೀಡುವ ಹಾಗೂ ಅವರ ವಿರುದ್ಧ ಆರ್ಥಿಕ, ಸಾಮಾಜಿಕ ಬಹಿಷ್ಕಾರಕ್ಕೆ ಕರೆ ನೀಡುವಂತಹ ದ್ವೇಷಭಾಷಣಗಳನ್ನು ಮಟ್ಟಹಾಕುವಂತೆ ಕೋರಿ ಪತ್ರಕರ್ತ ಶಾಹೀನ್ ಅಬ್ದುಲ್ಲಾ ಅವರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು.

ವಿಭಿನ್ನ ಸಮುದಾಯಗಳ ನಡುವೆ ಸೌಹಾರ್ದ ಹಾಗೂ ಸದ್ಭಾವನೆಯಿರಬೇಕೆಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಎಸ್.ವಿ.ಎನ್. ಭಟ್ಟ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ.

“ಶಾಂತಿ, ಸೌಹಾರ್ದ ಸ್ಥಾಪನೆಗೆ ಎಲ್ಲಾ ಸಮುದಾಯಗಳು ಹೊಣೆಗಾರರಾಗಿವೆ. ದ್ವೇಷಭಾಷಣವು ಒಳ್ಳೆಯದಲ್ಲ ಹಾಗೂ ಅದನ್ನು ಯಾರೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ' ಎಂದು ಸುಪ್ರೀಂಕೋರ್ಟ್ ತಿಳಿಸಿತು. ದ್ವೇಷಭಾಷಣಗಳ ಪರಿಶೀಲನೆಗೆ ಸಮಿತಿ ರಚನೆಯ ಬಗ್ಗೆ ಆಗಸ್ಟ್ 18ರೊಳಗೆ ಉತ್ತರಿಸುವಂತೆ ನ್ಯಾಯಾಲಯವು ಕೇಂದ್ರ ಸರಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಅವರಿಗೆ ತಿಳಿಸಿತು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...