ಹಾಥರಸ್ ಪ್ರಕರಣ: ಆರೋಪಿಗಳ ಖುಲಾಸೆ, ದಲಿತ-ಬಹುಜನ ಆದಿವಾಸಿ-ವಿಮುಕ್ತ ಆಕ್ರೋಶ

Source: Vb | By I.G. Bhatkali | Published on 12th March 2023, 12:20 PM | National News |

ಹೊಸದಿಲ್ಲಿ: ಹಾಥರಸ್‌ನಲ್ಲಿ 2020 ಸೆಪ್ಟೆಂಬರ್‌ನಲ್ಲಿ ನಡೆದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಲ್ಲಿ ಮೂವರನ್ನು ಖುಲಾಸೆಗೊಳಿಸಿ ಉತ್ತರಪ್ರದೇಶದ ವಿಶೇಷ ನ್ಯಾಯಾಲಯ ನೀಡಿದ ತೀರ್ಪನ್ನು ದಲಿತ -ಬಹುಜನ-ಆದಿವಾಸಿ-ವಿಮುಕ್ತ(ಡಿಬಿಎವಿ)ದ ಹೋರಾಟಗಾರರು ಖಂಡಿಸಿದ್ದಾರೆ.

ನ್ಯಾಯ ಸಮ್ಮತ ವಿಚಾರಣೆಗೆ ತೀರ್ಪಿನ ವಿರುದ್ಧ ಉಚ್ಚ ನ್ಯಾಯಾಲಯಕ್ಕೆ ವಿಳಂಬಿಸದೆ ಮೇಲ್ಮನವಿ ಸಲ್ಲಿಸುವಂತೆ ಸಾಮಾಜಿಕ ಹೋರಾಟಗಾರರ ಗುಂಪು ಉತ್ತರ ಪ್ರದೇಶ ಸರಕಾರಕ್ಕೆ ಮನವಿ ಮಾಡಿದೆ.

ಪ್ರಕರಣದಲ್ಲಿ ಸಂತ್ರಸ್ತೆ ವಾಲ್ಮೀಕಿ ಸಮುದಾದ 19 ವರ್ಷದ ಯುವತಿ, ಆರೋಪಿಗಳೆಲ್ಲರೂ ಪ್ರಬಲ ಜಾತಿಯಾದ ಠಾಕೂರ್ ಸಮುದಾಯಕ್ಕೆ ಸೇರಿದವರು. ಆದುದರಿಂದ ನ್ಯಾಯದ ದಾರಿ ತಪ್ಪಿಸಿರುವುದರಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾದ ಜಿಲ್ಲಾ ದಂಡಾಧಿಕಾರಿ ಹಾಗೂ ಪೊಲೀಸ್‌ ಅಧೀಕ್ಷಕರ ವಿರುದ್ಧ ತನಿಖೆ ನಡೆಸುವಂತೆ ಸಾಮಾಜಿಕ ಹೋರಾಟಗಾರರು ಕೋರಿದ್ದಾರೆ.

“ಅಂತರ್‌ರಾಷ್ಟ್ರೀಯ ಮಹಿಳಾ ದಿನದ ಮುನ್ನಾ ದಿನ ಈ ತೀರ್ಪು ಹೊರಬಿದ್ದಿದೆ. ಆದರೆ, ದಮನಿತ ಜಾತಿಯ ಮಹಿಳೆಯರು ಈ ದಿನವನ್ನು ಆಚರಿಸುವುದರಲ್ಲಿ ಯಾವುದೇ ಅರ್ಥ ಇಲ್ಲ. ಇದರ ಬದಲು ಜಾತಿವಾದದಿಂದ ಪೀಡಿತವಾದ ಸಮಾಜದಲ್ಲಿ ನಮ್ಮ ಸ್ತ್ರೀತ್ವಕ್ಕೆ ಗೌರವ ಸಿಗಲಾರದು ಎಂದು ನಮಗೆ ಆಗಾಗ ನೆನಪಿಸಲಾಗುತ್ತಿದೆ'' ಎಂದು ಹೇಳಿಕೆ ತಿಳಿಸಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...