ಯಲ್ಲಾಪುರ:ಕಂದಾಯ ಇಲಾಖೆಯಲ್ಲಿ ೪೦ ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ,ಈಗ ಕಳೆದ ೪ ವರ್ಷಗಳಿಂದ ಯಲ್ಲಾಪುರದ ತಹಶಿಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಡಿ.ಜಿ. ಹೆಗಡೆ ಅವರು ಇಂದು ಸೇವಾ ನಿವೃತ್ತಿ ಹೊಂದಿದರು.ಈ ಕುರಿತು ಇಲಾಖೆ ವತಿಯಿಂದ ಬಿಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.ತಾಲೂಕಿನ ಎಪಿಎಂಸಿಯ ರೈತ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಇಲಾಖೆಯ ವತಿಯಿಂದ ಗೌರವಿಸಿ ಬೀಳ್ಕೊಡಲಾಯಿತು.ಸಹಾಯಕ ಆಯುಕ್ತ ಈಶ್ವರ ಉಳ್ಳಾಗಡ್ಡಿಯವರು ಅವರನ್ನು ಗೌರವ ಸನ್ಮಾನ ನೀಡಿ,ನಿವೃತ್ತಿ ಜೀವನಕ್ಕೆ ಶುಭಹಾರೈಸಿದರು.ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು