ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರನ್ನು ಸಮಾಜದ ಗೌರವದಿಂದ ಕಾಣಬೇಕು -ಕೆ.ಎಚ್‌.ಮುನಿಯಪ್ಪ

Source: sonews | By Staff Correspondent | Published on 21st April 2020, 8:02 PM | State News |

ಶ್ರೀನಿವಾಸಪುರ: ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ದುಡಿಯುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರನ್ನು ಸಮಾಜದ ಗೌರವದಿಂದ ಕಾಣಬೇಕು ಎಂದು ಮಾಜಿ ಲೋಕಸಭಾ ಸದಸ್ಯ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಸಾರ್ವಜನಿಕರಿಗೆ ವಿತರಿಸಲು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್ ಅವರಿಗೆ ಬಟ್ಟೆ ಮಾಸ್ಕ್‌ಗಳನ್ನು ಹಸ್ತಾಂತರಿಸಿ ಮಾತನಾಡಿ, ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೊನಾ ತಡೆಯಲು ಹೋದ ಆರೋಗ್ಯ ಇಲಾಖೆ ಸಿಬಂದಿ ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿರುವುದು ದುರದೃಷ್ಟಕರ. ಕರೊನಾ ತಡೆ ವಿಷಯದಲ್ಲಿ ಕಾಂಗ್ರೆಸ್‌ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪೂರ್ಣ ಬೆಂಬಲ ನೀಡುವುದು ಎಂದು ಹೇಳಿದರು.

ಕೊರೊನಾ ಸಂಬಂಧ ತಮ್ಮ ನಿವೃತ್ತ ವೇತನದ ಶೇ.30 ರಷ್ಟನ್ನು ಕೊರೊನಾ ಹರಡುವಿಕೆ ನಿಲ್ಲುವ ವರೆಗೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಪ್ರಕಟಿಸಿದರು.

ರಾಜ್ಯ ಮಾವು ಅಭಿವೃದ್ಧಿ ಹಾಗೂ ಮಾರುಕಟ್ಟೆ ಮಂಡಳಿ ಮಾಜಿ ಅಧ್ಯಕ್ಷ ಎಲ್‌.ಗೋಪಾಲಕೃಷ್ಣ ಮಾತನಾಡಿ, ಲಾಕ್‌ ಡೌನ್‌ನಿಂದಾಗಿ ಹಣ್ಣು ಹಾಗೂ ತರಕಾರಿಗೆ ಬೇಡಿಕೆ ಕುಸಿದು ರೈತರು ಬೆಳೆ ನಷ್ಟ ಅನುಭವಿಸುತ್ತಿದ್ದಾರೆ. ಟೊಮೆಟೊ, ಬೀನ್ಸ್‌, ಕ್ಯಾಪ್ಸಿಕಂ, ಕೋಸು ಮತ್ತಿತರ ತೋಟದ ಬೆಳೆಗಳು ತೋಟಗಳಿಲ್ಲಯೇ ಕೊಳೆಯುತ್ತಿವೆ. ಮಾ.22 ರಿಂದ ಸ್ಥಳೀಯವಾಗಿ ಸಂಕಷ್ಟಕ್ಕೆ ಒಳಗಾಗಿರುವ ರೈತರಿಂದ ತರಕಾರಿ ಖರೀದಿಸಿ ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಗುವುದು ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌, ಕಾಂಗ್ರೆಸ್‌ ಮುಖಂಡರಾದ ಜಯದೇವ್‌, ಅಕ್ಬರ್‌ ಷರೀಫ್‌, ಎನ್‌.ಜಿ.ಬ್ಯಾಟಪ್ಪ, ಕೃಷ್ಣೇಗೌಡ, ನಾಗರಾಜ್‌, ನರಸಿಂಹಸ್ವಾಮಿ, ಪ್ರಸಾದ್‌ ಬಾಬು, ಮುನಿವೆಂಕಟಪ್ಪ, ಎಚ್‌.ವಿ.ಕುಮಾರ್‌, ಪ್ರಕಾಶ್‌, ಟಿಎಚ್ಒ ಡಾ.ವಿಜಯ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...