ಉಡುಪಿ : ಜಿಲ್ಲೆಯಾದ್ಯಂತ ಸತತ 24 ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ನದಿ ಪಾತ್ರದ ಹಲವು ಮನೆಗಳಿಗೆ ನೆರೆ ನೀರು ನುಗ್ಗಿದೆ.
ನದಿ ಪ್ರದೇಶದ ಅಲೆವೂರು, ಕೆಮ್ತೂರು, ಉದ್ಯಾವರ, ಬೊಳ್ಜೆ, ಕಲ್ಸಂಕ, ನಿಟ್ಟೂರು, ಬಲೈಪಾದೆ, ಬನ್ನಂಜೆ, ಕಲ್ಮಾಡಿಯ ಸಹಿತ ಅನೇಕ ಮನೆಗಳಿಗೆ ನೆರೆ ನೀರು ತುಂಬಿದೆ. ಅಲೆವೂರಿನ ಪೆರುಪಾದೆ ಎಂಬಲ್ಲಿ ಮನೆಯೊಂದಕ್ಕೆ ನೀರು ನುಗ್ಗಿದ್ದರಿಂದ ಕೆಲ ಕುಟುಂಬದವರು ರಕ್ಷಣೆ ಮಾಡಲು ಸ್ಥಳೀಯರಲ್ಲಿ ವಿನಂತಿ ಮಾಡಿದ್ದರು.ಹೀಗಾಗಿ ನೂರಾರು ಜನರನ್ನ ಸ್ಥಳಾಂತರ ಮಾಡಲಾಗಿದೆ.
ಜಿಲ್ಲಾಡಳಿತದಿಂದ ರಕ್ಷಣಾ ಕಾರ್ಯ ನಡೆಸಲಾಗಿದೆ.
ನಿಟ್ಟೂರು, ಅಡ್ಕದಕಟ್ಟೆ ತಡ ರಾತ್ರಿ ಹಲವಾರು ಮನೆಗಳಿಗೆ ನೀರು ನುಗ್ಗಿದ್ದವು. ಸ್ಥಳೀಯ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ ತಮ್ಮ ತಂಡದೊಂದಿಗೆ ರಕ್ಷಣಾ ಕಾರ್ಯದಲ್ಲಿ ಮಾಡಿದರು.