ಭಟ್ಕಳ; ಎಡೆಬಿಡದ ಮಳೆಗೆ ಜನಜೀವನ ಅಸ್ತವ್ಯಸ್ಥ

Source: sonews | By Staff Correspondent | Published on 21st July 2019, 4:15 PM | Coastal News | Don't Miss |

ಭಟ್ಕಳ: ರವಿವಾರ ಬೆಳಿಗ್ಗೆಯಿಂದ ಭಟ್ಕಳ ತಾಲೂಕಿನಾದ್ಯಂತ ಎಡೆಬಿಡದೆ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯೆಸ್ಥಗೊಂಡಿದೆ.ನಗರದ ತಗ್ಗು ಪ್ರದೇಶಗಳು ತುಂಬಿಕೊಂಡಿದ್ದು ಮನಗಳ ಒಳಗೆ ನೀರು ನುಗ್ಗತೊಡಗಿದೆ. 

ನಗರದ ಹೃದಯಭಾಗವಾಗಿರುವ ಶಮ್ಸುದ್ದೀನ್ ವೃತ್ತದಲ್ಲಿ ನೀರು ಮೊಣಕಾಲು ಮಟ್ಟ ತುಂಬಿಕೊಂಡಿದ್ದು ವಾಹನಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ.  ಹನಿಫಾಬಾದ್ ಪ್ರದೇಶದ ರಹ್ಮತಾಬಾದ್ ಮೊಹಲ್ಲಾದಲ್ಲಿ ಕೆಸರು ಗದ್ದೆಯಂತಾಗಿರುವ ರಸ್ತೆಯಲ್ಲಿ ಶಾಲಾವಾಹನವೊಂದು ರಸ್ತೆಯಲ್ಲಿ ಸಿಲುಕಿಕೊಂಡ ಪರಿಣಾ ಕೆಲ ಹೊತ್ತು ರಸ್ತೆ ತಡೆಯುಂಟಾಗಿರುವ ಘಟನೆಯೂ ವರದಿಯಾಗಿದೆ. ಅಲ್ಲದೆ ರಸ್ತೆಯ ಪಕ್ಕದಲ್ಲಿ ನಿರ್ಮಿಸಿದ ಚರಂಡಿ ಮಳೆನೀರಿನಿಂದ ತುಂಬಿಕೊಂಡಿದ್ದು ರಸ್ತೆ ಹಾಗೂ ಚರಂಡಿ ನಡುವೆ ವ್ಯತ್ಯಾಸ ಕಾಣದೆ ಜನರು ಚರಂಡಿಗೆ ಜಾರಿ ಆಸ್ಪತ್ರೆಗೆ ಸೇರಿರುವ ಘಟನೆಯೂ ವರದಿಯಾಗಿದ್ದು ಇನ್ನೂ ಗ್ರಾಮೀನ ಭಾಗದದಲ್ಲಿ ಏನೆಲ್ಲ ತೊಂದರೆಗಳು ಸಂಭವಿಸಿವೆ ಎನ್ನುವುದು ಇನ್ನಷ್ಟೆ ತಿಳಿದುಬರಬೇಕಾಗಿದೆ.  
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...