ಭಟ್ಕಳ : ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಘೋಷಣೆಯಾಗಿ ಇನ್ನೇನು ಅಧಿಕಾರ ಸಮೀಪಿಸುತ್ತಿದೆ ಎನ್ನುತ್ತಿರುವಾಗಲೆ ವಿಘ್ನಗಳು ಎದುರಾಗುತ್ತಿವೆ.
ನಗರಸಭೆಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿಗೆ ಅ.15 ರಂದು ರಾಜ್ಯ ಉಚ್ಚ ನ್ಯಾಯಾಲಯ ತಡೆ ನೀಡಿದ ಬೆನ್ನಲ್ಲೇ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿಗೂ ರಾಜ್ಯ ಉಚ್ಛ ನ್ಯಾಯಾಲಯ ಸೋಮವಾರ ತಡೆ ನೀಡಿದೆ.
ಹೀಗಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ತಡವಾಗಲಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಕೋಲಾರ ಬಾಗೇಪಲ್ಲಿ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಶ್ನಿಸಿ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯ ರಾಜ್ಯ ಸರ್ಕಾರ ಅಕ್ಟೋಬರ್ 8 ರಂದು ಹೊರಡಿಸಿದ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿಗೆ ತಡೆ ನೀಡಿದೆ.
ಯಾವುದೇ ಆಯ್ಕೆ ಪ್ರಕ್ರಿಯೆ ನಡೆಸದಂತೆ ಸೂಚಿಸಿದೆ. ಹೀಗಾಗಿ ನಗರಸಭೆಯ ಹಾಗೆ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಗ್ರಹಣ ಬಡಿದಂತಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರತಿನಿಧಿಗಳು ಅಧಿಕಾರಕ್ಕೆ
ಮತ್ತಷ್ಟು ಕಾಲ ತಡವಾಗುವಂತಾಗಿದೆ.