ಹೈಕೋರ್ಟ್ ಲೋಕ ಅದಾಲತ್ 4 ಕೋಟಿ ರೂ.ಗಳಿಗೂ ಅಧಿಕ ಮೊತ್ತದ 221 ಪ್ರಕರಣಗಳ ಇತ್ಯರ್ಥ

Source: SO News | By Laxmi Tanaya | Published on 26th June 2022, 10:09 PM | State News | Don't Miss |

ಧಾರವಾಡ :  ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ  ನಡೆದ  ರಾಷ್ಟ್ರೀಯ  ಲೋಕ ಅದಾಲತ್‌ನಲ್ಲಿ 221 ಪ್ರಕರಣಗಳಲ್ಲಿ ಸುಮಾರು 4 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಪರಿಹಾರಕ್ಕೆ ಇತ್ಯರ್ಥಪಡಿಸಲಾಯಿತು.

 ಹಿರಿಯ ನ್ಯಾಯಮೂರ್ತಿ ಕೆ. ಎಸ್. ಮುದಗಲ್, ನ್ಯಾಯಮೂರ್ತಿಗಳಾದ  ಪ್ರದೀಪ ಸಿಂಗ ಯೆರೂರ್, ಎಂ.ಜಿ.ಎಸ್ . ಕಮಲ್ , ಅದಾಲತ್‌ನ ಸದಸ್ಯರುಗಳಾದ ಎಮ್.ಟಿ . ಬಂಗಿ , ಡಿ . ಎಲ್ . ಲಾಡಖಾನ ಮತ್ತು  ಎಮ್. ಸಿ . ಹುಕ್ಕೇರಿ ಅವರನ್ನೊಳಗೊಂಡ   3 ಪೀಠಗಳಲ್ಲಿ    ಒಟ್ಟು 1227 ಪ್ರಕರಣಗಳನ್ನು ವಿಚಾರಣೆಗೆ ಗುರುತಿಸಿಕೊಂಡು, ಅವುಗಳಲ್ಲಿ ಒಟ್ಟು 221 ಪ್ರಕರಣಗಳನ್ನು ರೂ .4,46,53,063 ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು.

  ನ್ಯಾಯಮೂರ್ತಿಗಳಾದ  ಎಂ.ಜಿ.ಎಸ್ . ಕಮಾಲ್ ಹಾಗೂ ಎಮ್ . ಸಿ . ಹುಕ್ಕೇರಿ ವಕೀಲರವರ ಲೋಕ ಅದಲಾತ್ ಪೀಠವು ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 30 ವರ್ಷಗಳ ಹಳೆಯದಾದ ದಿವಾಣಿ ಪ್ರಕರಣವನ್ನು ರಾಜಿ - ಸಂಧಾನದ ಮೂಲಕ ಉಭಯ ಪಕ್ಷಗಾರರ ಸಮಕ್ಷಮ ಇತ್ಯರ್ಥಪಡಿಸಿರುವುದು ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್‌ನ ಹೆಗ್ಗಳಿಕೆಯಾಗಿದೆ .
 ಇದರಿಂದ ಉಭಯ ಪಕ್ಷಗಾರರಿಗೆ ತುಂಬಾ ಅನುಕೂಲವಾಗಿದ್ದು ವ್ಯಾಜ್ಯ ಮುಕ್ತರಾಗಿರುತ್ತಾರೆ  ಎಂದು ಹೈಕೋರ್ಟಿನ ನ್ಯಾಯಾಂಗದ  ಅಧಿಕ ವಿಲೇಖನಾಧಿಕಾರಿ  ಮತ್ತು  ಉಚ್ಛ ನ್ಯಾಯಾಲಯ ಕಾನೂನು ಸೇವಾ ಸಮಿತಿ ಕಾರ್ಯದರ್ಶಿ  ವೆಂಕಟೇಶ ಆರ್.ಹುಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...