ಪಡೀಲ್ ಸಮೀಪ ಗುಡ್ಡ ಕುಸಿತ: ರೈಲು ಸಂಚಾರ ವ್ಯತ್ಯಯ.

Source: SO News | By Laxmi Tanaya | Published on 21st September 2020, 12:32 PM | Coastal News |

ಮಂಗಳೂರು :  ಅಧಿಕ ಮಳೆಯಿಂದಾಗಿ ಪಡೀಲ್ ರೈಲ್ವೇ ನಿಲ್ದಾಣದ ಬಳಿ ಗುಡ್ಡ ಕುಸಿತವುಂಟಾಗಿದೆ. ಘಟನೆಯಿಂದ  ಬೈಪಾಸ್ ರಸ್ತೆಯ ರೈಲ್ವೇ ಹಳಿ ಮೇಲೆ ಭಾರಿ ಪ್ರಮಾಣದ ಮಣ್ಣು ಬಿದ್ದಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಈ ಭಾಗದಲ್ಲಿ 15 ಮೀಟರ್‌ ಎತ್ತರ ಹಾಗೂ 50 ಮೀಟರ್‌ ಉದ್ದ ಗುಡ್ಡ ಕುಸಿದಿದೆ. ಮಣ್ಣು ಬಿದ್ದಿರುವುದರಿಂದ ಮೈಸೂರು - ತೋಕೂರು - ಪಣಂಬೂರು ಮೂಲಕ ಹಾಸನಕ್ಕೆ ಸಂಚರಿಸುವ ಬೈಪಾಸ್ ಲೈನ್‍ಗೆ  ಅಡ್ಡಿಯಾಗಿದೆ. ಕುಸಿದಿರುವ ಮಣ್ಣು ರೈಲ್ವೆ ಹಳಿಯನ್ನು ಸಂಪೂರ್ಣ ಆವರಿಸಿಕೊಂಡಿರುವುದರಿಂದ ಕೊಂಕಣ ರೈಲ್ವೆಯಿಂದ ಹಾಸನ, ಮೈಸೂರು, ಬೆಂಗಳೂರು ಕಡೆ ಸಂಚರಿಸುವ ರೈಲುಗಳಿಗೆ ತೊಂದರೆಯಾಗಲಿದೆ.

ಆದರೆ ಪ್ರಯಾಣಿಕರ ರೈಲು ಸಂಚಾರಕ್ಕೆ ಯಾವುದೇ ಸಮಸ್ಯೆಯಾಗಿಲ್ಲ. ಕಾರವಾರ - ಬೆಂಗಳೂರು ವಿಶೇಷ ರೈಲು ಮಂಗಳೂರು ಜಂಕ್ಷನ್ ಮೂಲಕ ಸಂಚರಿಸಲಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ. ಕಳೆದೆರಡು ದಿನಗಳಿಂದ ಉಡುಪಿ, ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಗುಡ್ಡ ಕುಸಿತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...