ಜಂತರ್ ಮಂತರ್ನಲ್ಲಿ ಕೋಮು ಘೋಷಣೆ ಕೂಗಿದ್ದ ಹಿಂದೂ ರಕ್ಷಾ ದಳದ ಮುಖ್ಯಸ್ಥನ ಸೆರೆ
ಹೊಸದಿಲ್ಲಿ: ಇಲ್ಲಿಯ ಜಂತರ್ ಮಂತರ್ನಲ್ಲಿ ಆ.8ರಂದು ನಡೆದಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಕೋಮು ಘೋಷಣೆಗಳನ್ನು ಕೂಗಿದ್ದ ಆರೋಪಿ ಹಿಂದೂ ರಕ್ತಾ ದಳದ ಮುಖ್ಯಸ್ಥ ಭೂಪಿಂದರ್ ತೋಮರ್ ಅಲಿಯಾಸ್ ಪಿಂಕಿ ಚೌಧರಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಸೋಮವಾರ ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ್ದ ವೀಡಿಯೊದಲ್ಲಿ ಚೌಧರಿ ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದ. ಮಂಗಳವಾರ ತಾನು ಪೊಲೀಸರೆದುರು ಶರಣಾಗುವುದಾಗಿ ಮತ್ತು ತನಿಖೆಗೆ ಸಹಕರಿಸುವುದಾಗಿ ಆತ ವೀಡಿಯೊದಲ್ಲಿ ಹೇಳಿದ್ದ.
ಪ್ರತಿಭಟನೆ ಸಂದರ್ಭದಲ್ಲಿ ಮುಸ್ಲಿಂ ವಿರೋಧಿ ಘೋಷಣೆ ಗಳನ್ನು ಕೂಗುತ್ತಿದ್ದುದನ್ನು ತೋರಿಸುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಪ್ರಕರಣವನ್ನು ದಾಖಲಿಸಿಕೊಂಡಿದ್ದ ದಿಲ್ಲಿ ಪೊಲೀಸರು ಎಂಟು ಜನರನ್ನು ಈಗಾಗಲೇ ಬಂಧಿಸಿದ್ದಾರೆ. ಚೌಧರಿಯ ಬಂಧನಕ್ಕಾಗಿ ದಿಲ್ಲಿ ಮತ್ತು ನೆರೆಯ ರಾಜ್ಯ ಗಳಲ್ಲಿ ದಾಳಿಗಳನ್ನು ನಡೆಸಲಾಗಿತ್ತು.
ಧರಿಗೆ ಬಂಧನದ ವಿರುದ್ಧ ಮಧ್ಯಂತರ ರಕ್ಷಣೆ ನೀಡಲು ದಿಲ್ಲಿ ಉಚ್ಚ ನ್ಯಾಯಾಲಯವು ಶುಕ್ರವಾರ ನಿರಾಕರಿಸಿತ್ತು. ಇದಕ್ಕೂ ಮುನ್ನ ದಿಲ್ಲಿಯ ಸೆಷನ್ಸ್ ನ್ಯಾಯಾಲಯವು ಚೌಧರಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಿರಾಕರಿಸಿತ್ತು.