ಗೃಹ ಸಚಿವ ಅಮಿತ್ ಶಾಗೆ ಎಲುಬು ಕ್ಯಾನ್ಸರ್? ಇದು ವದಂತಿ ಎಂದ ಆಲ್ಟ್ ನ್ಯೂಸ್‌ ಫ್ಯಾಕ್ಟ್ ಚೆಕ್

Source: sonews | By Staff Correspondent | Published on 9th May 2020, 5:57 PM | National News | Don't Miss |

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಟ್ವೀಟ್‌ ಮಾಡಿದ್ದಾರೆ ಎನ್ನಲಾಗಿರುವ ನಕಲಿ ಟ್ವೀಟ್‌ವೊಂದರ ಸ್ಕ್ರೀನ್‌ಶಾಟ್ ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ. ಸ್ಕ್ರೀನ್‌ಶಾಟ್‌ನ ಪ್ರಕಾರ, ಅವರು ಮೂಳೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಬೇಕೆಂದು ಕೇಳಿಕೊಳ್ಳುತ್ತಿದ್ದಾರೆ ಸಂದೇಶವಿದೆ. ಕೋವಿಡ್ -19 ಸಂದರ್ಭದಲ್ಲಿ ಏಕಾಏಕಿ ಗೃಹ ಸಚಿವರು ಸಾರ್ವಜನಿಕ ವಲಯದಲ್ಲಿ ಕಡಿಮೆ ಕಾಣಿಸಿಕೊಳ್ಳುತ್ತಿರುವುದನ್ನು ಜನರು ಪ್ರಶ್ನಿಸುತ್ತಿರುವಾಗಲೇ ಈ ಟ್ವೀಟ್ ಹರಿದಾಡುತ್ತಿದೆ.

ಅಮಿತ್ ಶಾ ಟ್ವೀಟ್ ಮಾಡಿದ್ದಾರೆ ಎಂದು ಹೇಳಲಾಗಿರುವ ಹಿಂದಿ ಭಾಷೆಯ ಟ್ವೀಟ್ ನಲ್ಲಿ ಹೀಗೆ ಉಲ್ಲೇಖಿಸಲಾಗಿದೆ.

ನನ್ನ ದೇಶದ ಜನರೇ, ನಾನು ತೆಗೆದುಕೊಂಡ ಪ್ರತಿಯೊಂದು ಹೆಜ್ಜೆಯೂ ದೇಶದ ಹಿತದೃಷ್ಟಿಯಿಂದ, ಯಾವುದೇ ಜಾತಿ ಅಥವಾ ಧರ್ಮದ ಯಾವುದೇ ವ್ಯಕ್ತಿಯೊಂದಿಗೆ ನನಗೆ ದ್ವೇಷವಿಲ್ಲ, ಕೆಲವು ದಿನಗಳಿಂದ ಆರೋಗ್ಯದ ಕೆಟ್ಟ ಕಾರಣ ದೇಶದ ಜನರ ಸೇವೆ ಮಾಡಲು ನನಗೆ ಸಾಧ್ಯವಾಗಲಿಲ್ಲ. ನನ್ನ ಗಂಟಲಿನ ಹಿಂಭಾಗದಲ್ಲಿ ನನಗೆ ಮೂಳೆ ಕ್ಯಾನ್ಸರ್ ಇದೆ ಎಂದು ಹೇಳಲು ನನಗೆ ವಿಷಾದವಿದೆ. ರಮಝಾನ್ ಹಬ್ಬದ ಈ ಸಂತೋಷದ ತಿಂಗಳಲ್ಲಿ ಮುಸ್ಲಿಂ ಸಮಾಜದ ಸಹೋದರರು ಸಹ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಾರೆ ಮತ್ತು ನಾನು ಗುಣಮುಖನಾಗುವ ಮೂಲಕ ಶೀಘ್ರವೇ ನಿಮ್ಮ ಸೇವೆಗೆ ಹಾಜರಾಗುತ್ತೇನೆ.

ನಕಲಿ ಟ್ವಿಟರ್ ಸ್ಕ್ರೀನ್‌ಶಾಟ್!

ಅಮಿತ್ ಶಾ ಟ್ವೀಟ್ ಮಾಡಿದ್ದಾರೆಂಬ ಈ ಟ್ವೀಟ್ ನಕಲಿಯಾಗಿದ್ದು, ಟ್ವೀಟ್‌ನ ಗೆರೆ ನಿಯಮಾವಳಿಯನ್ನು ಮೀರಿದೆ. ಇದು ಫೋಟೋ ಶಾಪ್ ಮಾಡಲಾದ ಸಂದೇಶವಾಗಿದ್ದು, ಅಕ್ಷರಗಳ ಎಣಿಕೆಯನ್ನೂ ಕೂಡ ಮೀರಿದೆ. ಟ್ವಿಟರ್ ನಲ್ಲಿ ಕೇವಲ 280 ಅಕ್ಷರಗಳ ಎಣಿಕೆಗೆ ಅವಕಾಶವಿದ್ದು ನಕಲಿ ಟ್ವೀಟ್ ಈ ನಿಯಮವನ್ನು ಮೀರಿದೆ. ಅಲ್ಲದೇ, ಕಾಗುಣಿತ ಮತ್ತು ವ್ಯಾಕರಣದ ತಪ್ಪುಗಳು ಕೂಡ ನಕಲಿ ಟ್ವೀಟ್ ಒಳಗೊಂಡಿರುವುದಾಗಿ ಆಲ್ಟ್ ನ್ಯೂಸ್ ವರದಿ ಮಾಡಿದೆ.

ಕೃಪೆ: ಆಲ್ಟ್ ನ್ಯೂಸ್

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...