ಹೊನ್ನಾವರದ ಹೆಬ್ಬಾರ್ನಕೆರೆಯಲ್ಲಿ ಮನೆ ಕಳ್ಳತನ

Source: so news | By MV Bhatkal | Published on 24th June 2019, 7:49 PM | Coastal News | Don't Miss |

ಹೊನ್ನಾವರ: ತಾಲೂಕಿನ ಹೆಬ್ಬಾರ್ನಕೆರೆಯ ಬಾಲಚಂದ್ರ ಗಣಪತಿ ಹೆಗಡೆಯವರ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಬಾಲಚಂದ್ರ ಹೆಗಡೆಯವರ ಪತ್ನಿ ಚಂದ್ರಕಲಾ ಶಿಕ್ಷಕಿಯಾಗಿದ್ದು, ಇವರಿಗೆ ಅನಾರೋಗ್ಯದ ಹಿನ್ನಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಪತಿ ಬಾಲಚಂದ್ರ ಹೆಗಡೆಯವರು ಕರೆದುಕೊಂಡು ಹೋಗಿದ್ದರು. ಮನೆಯಲ್ಲಿ ಹಿರಿಯರು ಇಲ್ಲದ ಕಾರಣ ಹುಡುಗಿಯರಾದ ಅಶ್ವಿನಿ ಮತ್ತು ದಿವ್ಯಾ, ಅಜ್ಜಿ ಮನೆಗೆ ತೆರಳಿದ್ದರು. ಬಾಲಚಂದ್ರ ಹೆಗಡೆಯವರ ಮನೆಯವರು ಯಾರೂ ಇಲ್ಲದ ಸಮಯ ನೋಡಿ ಕಳ್ಳರು ದೇವರ ಕೋಣೆಯ ಕಿಟಕಿ ಮುರಿದು, ಒಳಹೊಕ್ಕಿ ಕಪಾಟಿನ ಬೀಗ ಮುರಿದು ಬಂಗಾರ ದೋಚಿದ್ದಾರೆ. ಪ್ರಕರಣ ಹೊನ್ನಾವರ ಪೊಲೀಸ ಠಾಣೆಯಲ್ಲಿ ದಾಖಲಾಗಿದ್ದು, ಕಾರವಾರದಿಂದ ಬೆರಳಚ್ಚು ತಜ್ಞರು, ಶ್ವಾನ ದಳದವರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...