ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಿಂದ ವಸತಿ ನಿಲಯ ಪರಿಶೀಲನೆ

Source: so news | Published on 20th November 2019, 12:12 AM | State News | Don't Miss |

 

ಬೀದರ:ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ಜಯಶ್ರೀ ಹಾಗೂ ಹೆಚ್.ಸಿ.ರಾಘವೇಂದ್ರ ಅವರು  ತಾಲೂಕಿನ ಜನವಾಡಾ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳ ಸಮಸ್ಯೆಗಳನ್ನು ಆಲಿಸಿದರು.
ಸುಮಾರು ಮೂರು ಗಂಟೆಗೂ ಹೆಚ್ಚುಕಾಲ ವಸತಿ ನಿಲಯದ ಮಕ್ಕಳೊಂದಿಗೆ ಮಾತುಕತೆ ನಡೆಸಿದ ಸದಸ್ಯರು, ಮಕ್ಕಳ ಎಲ್ಲ ಸಮಸ್ಯೆಗಳನ್ನು ಸಮಚಿತ್ತದಿಂದ ಆಲಿಸಿದರು. ವಸತಿ ನಿಲಯದಲ್ಲಿ ಒಟ್ಟು 56 ಮಕ್ಕಳ ದಾಖಲಾತಿ ಇದ್ದು, 19 ಮಕ್ಕಳು ಮಾತ್ರ ವಸತಿ ನಿಲಯದಲ್ಲಿ ಇರುವುದನ್ನು ಕಂಡು ನಿಲಯ ಪಾಲಕರಿಂದ ವಿವರಣೆ ಪಡೆದರು.
ಇದೇ ವೇಳೆ ಮಕ್ಕಳು ನಾನಾ ರೀತಿಯ ಸಮಸ್ಯೆಗಳ ಬಗ್ಗೆ ಸದಸ್ಯರಿಗೆ ತಿಳಿಸಿದರು. ವಸತಿ ನಿಲಯದ ದಾಖಲೆಗಾಗಿ ಕೆಲವು ಮಕ್ಕಳಿಂದ ಹಣ ಪಡೆಯುತ್ತಾರೆ. ಪೌಷ್ಠಿಕ ಆಹಾರ ಮತ್ತು ಸರಿಯಾದ ಸಮಯಕ್ಕೆ ಉಪಹಾರ ದೊರೆಯುವುದಿಲ್ಲ. ಈ ವರ್ಷ ನೋಟ್ ಬುಕ್ ನೀಡಿಲ್ಲ. ನಿಲಯಕ್ಕೆ ಸೋಲಾರ್ ವ್ಯವಸ್ಥೆ ಇದ್ದರೂ, ಮಕ್ಕಳಿಗೆ ಬಿಸಿ ನೀರು ಸಿಗುತ್ತಿಲ್ಲ. ವಿದ್ಯುತ್ ದೀಪಗಳು ಸರಿಯಾಗಿ ಕೆಲಸ ಮಾಡುವುದಿಲ್ಲ. ರಾತ್ರಿ ವೇಳೆ ಕುಡಿಯಲು ನೀರು ಸಿಗುವುದಿಲ್ಲ. ನಿಲಯ ಪಾಲಕರು ವಾರದಲ್ಲಿ ಕೇವಲ ಎರಡು ಭಾರಿ ಮಾತ್ರ ವಸತಿ ನಿಲಯಕ್ಕೆ ಬರುತ್ತಾರೆ. ಕೆಲವರಿಗೆ ಹಾಸಿಗೆ, ದಿಂಬು, ಬಕೆಟ್, ಬೆಡ್‍ಶೀಟ್ ನೀಡಿಲ್ಲ. ಆರೋಗ್ಯ ಸರಿಯಿಲ್ಲದ ಮಕ್ಕಳಿಗೆ ಚಿಕಿತ್ಸೆ ಕೊಡಿಸದೇ ಮನೆಗೆ ಕಳುಹಿಸುತ್ತಾರೆ. ಒಂದು ವರ್ಷದಿಂದ ಕಟ್ಟಿಂಗ್ ಮಾಡಿಸಿಲ್ಲ. ವಸತಿ ನಿಲಯಕ್ಕೆ ಟ್ಯೂಷನ್ ಟೀಚರ್‍ಗಳನ್ನು ನೇಮಿಸಿಲ್ಲ. ವಸತಿ ನಿಲಯಕ್ಕೆ ಅಧಿಕಾರಿಗಳು ಬಂದಾಗ ಮಕ್ಕಳು ಸಮಸ್ಯೆಗಳನ್ನು ಹೇಳಿಕೊಂಡರೆ ಅಧಿಕಾರಿಗಳು ಹೋದ ನಂತರ ಹೀಂಸೆ ಕೊಡುತ್ತಾರೆ ಹೀಗೆ ಹಲವು ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಲೆ ಪಿ.ಎಸ್.ಐ ಹಾಗೂ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಮಕ್ಕಳಿಗೆ ರಕ್ಷಣೆ ನೀಡುವಂತೆ ಆದೇಶಿಸಿದರು. ವಸತಿ ನಿಲಯದ ದಾಸ್ತಾನಿನಲ್ಲಿ ವಿತರಸದೇ ಇರುವ ದಿಂಬು, ಬೆಡ್, ಗ್ಲೌಸ್, ಸೊಳ್ಳೆ ಪರದೆಗಳನ್ನು ಕಂಡು ಅವುಗಳನ್ನು ಸ್ಥಳದಲ್ಲಿಯೇ ಮಕ್ಕಳಿಗೆ ವಿತರಿಸಿದರು.
ಮಕ್ಕಳ ಸಮಸ್ಯೆಗಳ ಕರಿತು ಸೂಕ್ತ ಕ್ರಮಕ್ಕಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ವರದಿ ಮಾಡಲಾಗುವುದು. ಇದೇ 28ರಂದು ರಾಯಚೂರಿನಲ್ಲಿ ನಡೆಯುವ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವಿಶೇಷ ಸಭೆಗೆ ಖುದ್ದು ಹಾಜರಾಗಿ ಸಮನ್ಸ್ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಂಭುಲಿಂಗ್ ಹಿರೇಮಠ, ರಕ್ಷಣಾಧಿಕಾರಿ ಗೌರಿಶಂಕರ ಪರತಾಪೂರೆ ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...