ಹಾಡುಹಗಲೇ ಮನೆ ದರೋಡೆ; ೨ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಲೂಟಿ
ಭಟ್ಕಳ : ತಾಲೂಕಿನ ಜಾಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಹಾಡುಹಗಲೆ ಮನೆಯವರು ಸಾರ್ವಜನಿಕ ಗಣೇಶನ ಪೂಜೆಗೆ ತೆರಳಿದ್ದ ಸಂದರ್ಭದಲ್ಲಿ ಒಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಶುಕ್ರವಾರ ಬೆಳಿಗ್ಗೆ ೧೦ ಗಂಟೆ ಸುಮಾರಿಗೆ ಪರಾರಿಯಾಗಿದ್ದಾರೆ.
ತಾಲೂಕಿನ ಹೆಬಳೆ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲಿಂಗಪ್ಪ ನಾಯ್ಕ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹಿಂಬದಿಯ ಬಾಗಿಲನ್ನು ಭದ್ರವಾಗಿ ಹಾಕದೇ ಇದ್ದು ದರಿಂದ ಯಾರೋ ಇದನ್ನು ಗಮನಿಸಿದ ಕಳ್ಳರು ಒಳಗೆ ನುಗ್ಗಿ ೨೦ ಸಾವಿರ ನಗದು ಹಾಗೂ ೧೦ ಉಂಗುರ,ಸರ, ಬಳೆ ಸೇರಿದಂತೆ ೨ ಲಕ್ಷಕ್ಕೂ ಹೆಚ್ಚು ಮೌಲ್ಯ ದ ಚಿನ್ನ ಆಭರಣ ದೋಚಲಾಗಿದೆ.ಸ್ಥಳ ಕ್ಕೆ ಪೋಲೀಸರು ಶ್ವಾನ ದಳದೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.. ಸಿಪಿಐ ಕೆ.ಎಲ್ ಗಣೇಶ ನೇತ್ರತ್ವದಲ್ಲಿ ತನಿಖೆ ನಡೆದಿದೆ.