ಭಟ್ಕಳ: ಕಳೆದೆರಡು ದಿನಗಳಿಂದ ಪಟ್ಟಣದಲ್ಲಿ ಸರಳವಾಗಿ ನಡೆಯುತ್ತಿದ್ದ ತಾಲೂಕಿನ ಸುಪ್ರಸಿದ್ದ ಮಾರಿ ಹಬ್ಬ ಗುರುವಾರ ಸಂಜೆ ಮಾರಿ ಮೂರ್ತಿ ವಿಸರ್ಜಿಸುವ ಮೂಲಕ ಸಂಪನ್ನಗೊಂಡಿತು.
ಕೋವಿಡ್-19 ವೈರಸ್ನ ಮೂರನೇ ಅಲೆಯ ಭೀತಿಯ ಹಿನ್ನಲೆಯಲ್ಲಿ ದೇವಿಯ ಮೂರ್ತಿಯನ್ನು ನಗರದ ಮಾರಿಗುಡಿಯಿಂದ ಕೆಲವೆ ಕೆಲವು ಭಕ್ತರು, ಸ್ವಯಂ ಸೇವಕರು, ಆಡಳಿತ ಮಂಡಳಿ ಸದಸ್ಯರುಗಳು ಸೇರಿ ಮೆರವಣಿಗೆಯ ಮೂಲಕ ಜಾಲಿಕೋಡಿಯ ಸಮುದ್ರ ತೀರಕ್ಕೆ ಒಯ್ದು ಅಲ್ಲಿ ಮೂರ್ತಿಯ ಭಾಗಗಳನ್ನು ಬೇರ್ಪಡಿಸಿ ಸಮುದ್ರದಲ್ಲಿ ವಿಸರ್ಜಿಸಲಾಯಿತು.
ಮದ್ಯಾಹ್ನ 4:30 ಗಂಟೆ ಸುಮಾರಿಗೆ ಸ್ವಯಂ ಸೇವಕರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಮಾರಿಯ ಮೂರ್ತಿಯನ್ನು ಮೆರವಣಿಗೆಯ ಮೂಲಕ ಜಾಲಿಕೋಡಿ ಸಮುದ್ರ ತೀರಕ್ಕೆ ಕೊಂಡೊಯ್ದು ವಿಧಿವಿಧಾನಗಳ ಮೂಲಕ ವಿಸರ್ಜಿಸುವದರೊಂದಿಗೆ ಮಾರಿ ಜಾತ್ರೆ ಸಂಪನ್ನಗೊಂಡಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪರಮೇಶ್ವರ ನಾಯ್ಕ, ನರೇಂದ್ರ ನಾಯಕ, ಶ್ರೀಧರ ನಾಯ್ಕ, ಶ್ರೀಪಾದ ಕಂಚುಗಾರ, ನಾರಾಯಣ ಖಾರ್ವಿ, ಮಾದೇವ ಮೊಗೇರ, ರಘುವೀರ ಬಾಳಗಿ, ದಿನೇಶ ನಾಯ್ಕ, ಕೃಷ್ಣ ನಾಯ್ಕ, ನಾರಾಯಣ ಖಾರ್ವಿ, ಗೋವಿಂದ ನಾಯ್ಕ, ಮುಂತಾದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಡಿವೈಎಸ್ಪಿ ಬೆಳ್ಳಿಯಪ್ಪ ನೇತೃತ್ವದಲ್ಲಿ ಸಿಪಿಐ ದಿವಾಕರ ಪಿ.ಎಸ್.ಐ ಭರತ ಇತರ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದರು. ಕೊರೊನಾ ವೈರಸ್ ಹಿನ್ನಲೆಯಲ್ಲಿ ಈ ಬಾರಿ ಮಾರಿದೇವಿಯ ಮೂರ್ತಿಯನ್ನು ವಾಹನದಲ್ಲಿ ಕೊಂಡೊಯ್ಯಲಾಯಿ