ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಕಲ್ಲಗಂಗೂರು ಗ್ರಾಮದ ವ್ಯಾಪ್ತಿಯಲ್ಲಿ ಜರುಗಿದ ಸ್ಪೋಟದ ಸ್ಥಳಕ್ಕೆ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯಕ ಇವರು ಇಂದು ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಘಟನೆಯ ಕುರಿತು ಮಾಹಿತಿ ಪಡೆದರು.
ಸರ್ಕಾರದ ಜವಳಿ ನೀತಿ ಅಡಿಯಲ್ಲಿ ವಿವಿಧ ಪ್ರೋತ್ಸಾಹಗಳನ್ನು ಪಡೆಯುತ್ತಿರುವ ನಗರದ ಮೆ|| ಶಾಹಿ ಎಕ್ಸಪೋರ್ಟ್ ಘಟಕಕ್ಕೆ ಭೇಟಿ ನೀಡಿ, ಈ ಉದ್ಯಮದವರು ಒದಗಿಸಿರುವ ಉದ್ಯೋಗ, ಅವರ ಉತ್ಪದನಾ ಚಟುವಟಿಕೆಗಳು ಇತ್ಯಾದಿಗಳನ್ನು ಪರಿಶೀಲಿಸಿದರು.